SHIVAMOGGA LIVE NEWS | 20 ಮಾರ್ಚ್ 2022
ಮೇಯಲು ಹೋಗಿದ್ದ ಹಸುವಿನ ಕಾಲನ್ನು ದುಷ್ಕರ್ಮಿಗಳು ಕತ್ತರಿಸಿದ್ದಾರೆ. ಮಚ್ಚಿನಿಂದ ಹಲ್ಲೆ ನಡೆಸಿ ಹಸುವಿನ ಕಾಲು ಕತ್ತರಿಸಲಾಗಿದೆ.
ಶಿವಮೊಗ್ಗ ತಾಲೂಕು ಚೋರಡಿ ಸಮೀಪದ ಹೊರಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಾಗರಾಜ ಎಂಬುವವರಿಗೆ ಸೇರಿದ ಹಸುವಿನ ಕಾಲು ಕತ್ತರಿಸಲಾಗಿದೆ.
ಎಲ್ಲಾ ಹಸುಗಳನ್ನು ಮೇವಿಗಾಗಿ ಕಾಡಿಗೆ ಬಿಡಲಾಗಿತ್ತು. ಸಂಜೆ ಹೊತ್ತಿಗೆ ಎಲ್ಲಾ ಹಸುಗಳು ಮನೆಗೆ ಹಿಂತಿರುಗಿವೆ. ಒಂದು ಹಸು ಮಾತ್ರ ಮರಳಿರಲಿಲ್ಲ. ಮರುದಿನ ಬೆಳಗ್ಗೆ ಖಾಲಿ ಹೊಲದಲ್ಲಿ ಹಸು ಇರುವುದು ಗೊತ್ತಾಗಿದೆ.
ಸಮೀಪಕ್ಕೆ ಹೋಗಿ ನೋಡಿದಾಗ ಹಸುವಿನ ಕಾಲಿಗೆ ಮಚ್ಚಿನಿಂದ ಹೊಡೆದು ಕತ್ತರಿಸಿರುವುದು ಕಂಡು ಬಂದಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200