SHIVAMOGGA LIVE NEWS | 21 FEBRUARY 2024
SHIMOGA : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರ ಹತ್ಯೆಗೆ ಯತ್ನಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ.
ಕೋಟೆ ಗಂಗೂರಿನ ಹಸಿರುಗಿಡಿದ ಮಾರಿಯಮ್ಮ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಗಣೇಶಪ್ಪ (65) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಾಚ್ ಮನ್ ಕೆಲಸ ಮಾಡುತ್ತಿದ್ದ ಗಣೇಶಪ್ಪ ಅವರು ಭಾನುವಾರ ಸಂಜೆ ಮನೆಯಿಂದ ಹೊರಗೆ ಹೋಗಿದ್ದರು. ಮರುದಿನ ಬೆಳಗಿನ ಜಾವ ಸ್ಥಳೀಯರೊಬ್ಬರು ಗಣೇಶಪ್ಪ ಅವರ ಮನೆಗೆ ಬಂದು ಹಸಿರುಗಿಡದ ಮಾರಿಯಮ್ಮ ದೇಗುಲದ ಬಳಿ ಘಟನೆ ನಡೆದಿರುವ ಕುರಿತು ಮಾಹಿತಿ ನೀಡಿದ್ದರು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ನಾಲ್ಕು ತಿಂಗಳಾಯ್ತು ಸದಸ್ಯರಿಲ್ಲ, ಕೂಡಲೆ ಚುನಾವಣೆ ನಡೆಸುವಂತೆ ಒತ್ತಾಯ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200