ಲೈಟ್‌ ವಿಚಾರಕ್ಕೆ ಅಣ್ಣ, ಅತ್ತಿಗೆ ರಾಡ್‌ನಲ್ಲಿ ಹೊಡೆದ ವ್ಯಕ್ತಿ, ಏನಿದು ರಾದ್ಧಾಂತ?

 ಶಿವಮೊಗ್ಗ  LIVE 

ಶಿವಮೊಗ್ಗ: ಲೈಟ್ ಹಾಕುವ ವಿಷಯಕ್ಕೆ ತಮ್ಮನೆ ಅಣ್ಣ ಮತ್ತು ಅತ್ತಿಗೆ ಮೇಲೆ ಹಲ್ಲೆ (attacks) ನಡೆಸಿದ್ದಾನೆ. ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ದಂಪತಿ (ಹೆಸರು ಗೌಪ್ಯ) ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಗಲು ಹೊತ್ತಿನಲ್ಲೇ ಮನೆಯಲ್ಲಿ ಲೈಟ್‌ ಹಾಕಿದ್ದೀಯ ಎಂದು ಅತ್ತಿಗೆಗೆ ಬೈದು ಕಬ್ಬಿಣದ ರಾಡ್‌ನಿಂದ ಹೊಡೆದಿದ್ದಾನೆ. ಜಗಳ ಬಿಡಿಸಲು ಬಂದ ಅಣ್ಣನ ಮೇಲೂ ಸಹೋದರ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ.

ಮೈದುನನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್‌ | 12 ಜನವರಿ 2026 | ಅಡಿಕೆ ಧಾರಣೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment