AYANURU, 21 AUGUST 2024 : ಬೇಕರಿಯೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಸಿಲಿಂಡರ್ಗಳು (cylinder) ಸ್ಪೋಟಗೊಂಡಿವೆ. ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ಘಟನೆ ಸಂಭವಿಸಿದೆ.
ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್ಎಲ್ವಿ ಐಯ್ಯಾಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೇಕರಿ ಒಳೆಗೆ ಮೂರು ಬಾರಿ ಸ್ಪೋಟ ಸಂಭವಿಸಿದೆ. ಸಿಲಿಂಡರ್ಗಳು ಸ್ಪೋಟಗೊಂಡಿವೆ ಎಂದು ಸ್ಥಳೀಯರು ಶಂಕಿಸಿದ್ದಾರೆ.
![]() |
ಬೇಕರಿಯ ಅಕ್ಕಪಕ್ಕದಲ್ಲಿನ ಅಂಗಡಿಯವರು, ಗ್ರಾಹಕರು ಕೂಡಲೆ ಸ್ಥಳದಿಂದ ಓಡಿ ಹೋಗಿದ್ದಾರೆ. ಬೇಕರಿ ಮುಂಭಾಗದಲ್ಲಿಯೇ ಪೆಟ್ರೋಲ್ ಬಂಕ್ ಇದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಇದೇ ಮೊದಲು ಸೇನೆಗೆ ಅಗ್ನಿವೀರರ ನೇಮಕಾತಿ ರ್ಯಾಲಿ, ನಾಳೆಯಿಂದ ಆಯ್ಕೆ ಶುರು, ಹೇಗಿದೆ ಸಿದ್ಧತೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200