ಸಕ್ರೆಬೈಲು ಬಿಡಾರದಲ್ಲಿ ರಕ್ತವಾಂತಿ ಮಾಡಿಕೊಂಡು ಮರಿ ಆನೆ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 1 ಜುಲೈ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಕ್ರೆಬೈಲು ಆನೆ ಬಿಡಾರದಲ್ಲಿ ಮರಿಯಾನೆ ಸಾವನ್ನಪ್ಪಿದೆ. ಕೆಲ ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮರಿ ಆನೆ, ರಕ್ತವಾಂತಿ ಮಾಡಿಕೊಳ್ಳುತ್ತಿತ್ತು. ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೆ, ಆನೆ ಸಾವನ್ನಪ್ಪಿದೆ.

ಶಾರದ, ಮೃತ ಮರಿ ಆನೆ. ಕಳೆದ ವರ್ಷ ಹಾಸನದಲ್ಲಿ ಸೆರೆ ಹಿಡಿಯಲಾಗಿದ್ದ ಆನೆಯನ್ನು ಸಕ್ರೆಬೈಲು ಆನೆ ಬಿಡಾರದಲ್ಲಿ ಸಾಕಲಾಗುತ್ತಿತ್ತು.

‘ಆನೆಗೆ ಬಿಡಾರದ ವೈದ್ಯರು ಚಿಕಿತ್ಸೆ ನೀಡುತ್ತಿದ್ದರೂ, ಫಲಕಾರಿಯಾಗದೆ ಮೃತಪಟ್ಟಿದೆ. ಆನೆಯ ಅಂಗಾಂಗಗಳನ್ನು ಪರೀಕ್ಷೆಗೆ ಒಳಪಡಿಸಲು ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿಗೆ ಮತ್ತು ಕೇರಳದ ಪಶು ಕಾಲೇಜಿಗೆ ಕಳುಹಿಸಲಾಗುತ್ತದೆ. ಆ ಬಳಿಕವೇ ಆನೆಯ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ವನ್ಯಜೀವಿ ಡಿಎಫ್ಒ ಆಂಥೋಣಿ ಮರಿಯಪ್ಪ ತಿಳಿಸಿದ್ದಾರೆ.

ಮರಿಯಾನ ಸಾವಿನಿಂದಾಗಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸಂಖ್ಯೆ 26 ರಿಂದ 25ಕ್ಕೆ ಇಳಿಕೆಯಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment