ಶಿವಮೊಗ್ಗ ಲೈವ್.ಕಾಂ | 1 ಜುಲೈ 2019
ಸಕ್ರೆಬೈಲು ಆನೆ ಬಿಡಾರದಲ್ಲಿ ಮರಿಯಾನೆ ಸಾವನ್ನಪ್ಪಿದೆ. ಕೆಲ ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮರಿ ಆನೆ, ರಕ್ತವಾಂತಿ ಮಾಡಿಕೊಳ್ಳುತ್ತಿತ್ತು. ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೆ, ಆನೆ ಸಾವನ್ನಪ್ಪಿದೆ.
ಶಾರದ, ಮೃತ ಮರಿ ಆನೆ. ಕಳೆದ ವರ್ಷ ಹಾಸನದಲ್ಲಿ ಸೆರೆ ಹಿಡಿಯಲಾಗಿದ್ದ ಆನೆಯನ್ನು ಸಕ್ರೆಬೈಲು ಆನೆ ಬಿಡಾರದಲ್ಲಿ ಸಾಕಲಾಗುತ್ತಿತ್ತು.
‘ಆನೆಗೆ ಬಿಡಾರದ ವೈದ್ಯರು ಚಿಕಿತ್ಸೆ ನೀಡುತ್ತಿದ್ದರೂ, ಫಲಕಾರಿಯಾಗದೆ ಮೃತಪಟ್ಟಿದೆ. ಆನೆಯ ಅಂಗಾಂಗಗಳನ್ನು ಪರೀಕ್ಷೆಗೆ ಒಳಪಡಿಸಲು ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿಗೆ ಮತ್ತು ಕೇರಳದ ಪಶು ಕಾಲೇಜಿಗೆ ಕಳುಹಿಸಲಾಗುತ್ತದೆ. ಆ ಬಳಿಕವೇ ಆನೆಯ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ವನ್ಯಜೀವಿ ಡಿಎಫ್ಒ ಆಂಥೋಣಿ ಮರಿಯಪ್ಪ ತಿಳಿಸಿದ್ದಾರೆ.
ಮರಿಯಾನ ಸಾವಿನಿಂದಾಗಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸಂಖ್ಯೆ 26 ರಿಂದ 25ಕ್ಕೆ ಇಳಿಕೆಯಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200