ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಅಪಘಾತ, ಆಸ್ಪತ್ರೆಯಲ್ಲಿ ವ್ಯಕ್ತಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

Published On : ಜನವರಿ 27, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ತೀರ್ಥಹಳ್ಳಿ ಮುಖ್ಯರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ (bike rider) ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಹೊಸ ಹೊನ್ನಾಪುರ ಗ್ರಾಮದ ರಸ್ತೆಯಲ್ಲಿ ಶಬೀರ್ ಅಹಮದ್ ಅವರು ತಮ್ಮ ಬೈಕ್‌ನಲ್ಲಿ ಸ್ನೇಹಿತ ಕೆ.ಎಂ. ಅಜೀಜುದ್ದೀನ್ ಅವರನ್ನು ಕೂರಿಸಿಕೊಂಡು ತೆರಳುತ್ತಿದ್ದರು. ಈ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಟಾಟಾ ಪಂಚ್ ಕಾರು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣ ಶಿವಮೊಗ್ಗದ ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶಬೀರ್ ಅಹಮದ್ ಅವರು ಕೊನೆಯುಸಿರೆಳೆದಿದ್ದಾರೆ.

Crime-News-General-Image

ಕಾರು ಚಾಲಕ ರಾಮಚಂದ್ರ ಎಂಬುವವರ ವಿರುದ್ಧ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಗೋಬಿ ತಿಂದು ವಾಪಸ್‌ ತೆರಳುವಾಗ ಗೊಂದಿಚಟ್ನಹಳ್ಳಿ ಬಳಿ ದುರ್ಘಟನೆ, ಯುವಕ ಸಾವು, ಆಗಿದ್ದೇನು?

Total-Readers-of-Shivamogga-Live
JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜನವರಿ 27, 2026

Leave a Comment