SHIVAMOGGA LIVE NEWS | 14 APRIL 2023
SHIMOGA : ರಾಷ್ಟ್ರೀಯ ಹೆದ್ದಾರಿ ಬದಿಯ ಆಲದ ಮರದ ಕೆಳಗೆ ವಾಮಾಚಾರ (Black Magic) ಮಾಡಲಾಗಿದೆ. ವಾಮಾಚಾರಕ್ಕೆ ಬಳಸಿದ ವಸ್ತುಗಳು ಮತ್ತು ಜೀವಂತ ಕುರಿ ಪತ್ತೆಯಾಗಿದೆ. ವಿಧಾನಸಭೆ ಚುನಾವಣೆ ಕಾರಣಕ್ಕೆ ವಾಮಾಚಾರ ನಡೆಸಿರುವ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಚರ್ಚೆಗೆ ಹುಟ್ಟುಹಾಕಿದೆ.
ಶಿವಮೊಗ್ಗ – ಸಾಗರ ರಸ್ತೆಯ ಮುದ್ದಿನಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಆಲದ ಮರದ ಕೆಳಗೆ ವಾಮಾಚಾರ (Black Magic) ನಡೆಸಲಾಗಿದೆ. ಮಡಕೆಗಳು, ಅನ್ನ, ಬಿದಿರಿನ ಮರ, ಬುಟ್ಟಿಗಳು, ಮೊಟ್ಟೆ, ಬಟ್ಟೆಗಳು, ಅರಿಶಿಣ, ಕುಂಕುಮ, ಗೊಂಬೆ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಮರದ ಪಕ್ಕದಲ್ಲಿ ಜೀವಂತ ಕುರಿಯನ್ನು ಕಟ್ಟಲಾಗಿದೆ.
![]() |
ಇದನ್ನೂ ಓದಿ – ಶಿವಮೊಗ್ಗದಿಂದ ಜೀರೋ ಟ್ರಾಫಿಕ್ನಲ್ಲಿ ವಿಶೇಷ ಆಂಬುಲೆನ್ಸ್ನಲ್ಲಿ ಡಾ.ವಿನಯ್ ಬೆಂಗಳೂರಿಗೆ ಶಿಫ್ಟ್
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ವಾಮಾಚಾರದ ವಿಷಯ ತಿಳಿದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200