ಶಿವಮೊಗ್ಗದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIMOGA NEWS, 12 OCTOBER 2024 : ಹಳ್ಳ ದಾಟುವಾಗ ಬೈಕ್‌ ಸಹಿತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಚ್ಚಿ ಹೋದ ಸ್ಥಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಮೃತದೇಹ ಸಿಕ್ಕಿದೆ (Found).
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಯಡವಾಲದ ಕೊಂಡಜ್ಜಿ ಹಳ್ಳದ ಸೇತುವೆಯನ್ನು ದಾಟುವಾಗ ಚಿನ್ನಿಕಟ್ಟೆಯ ಇಕ್ಬಾಲ್‌ (40) ಎಂಬುವವರು ತಮ್ಮ ಬೈಕ್‌ ಸಹಿತ ಕೊಚ್ಚಿ ಹೋಗಿದ್ದರು. ಭಾರಿ ಮಳೆಯಿಂದಾಗಿ ಸೇತುವೆ ಮೇಲ್ಭಾಗದಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಈ ಸಂದರ್ಭ ಆಯಾತಪ್ಪಿ ಇಕ್ಬಾಲ್‌ ಕೊಚ್ಚಿ ಹೋಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು.

muduvala-lake-rescue-operation

ಕೊಂಡಜ್ಜಿ ಹಳ್ಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಇಕ್ಬಾಲ್‌ ಅವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞರು ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌, ಎಲ್ಲೆಲ್ಲಿ ಎಷ್ಟೊತ್ತಿಗೆ ಮಳೆಯಾಗುತ್ತೆ?

Leave a Comment