ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಭದ್ರಾ ಎಡದಂಡೆ ಚಾನಲ್ (Canal) ನೀರು ಮತ್ತು ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ನೀರು ತೋಟ, ಗದ್ದೆ ಮತ್ತು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆ ಭದ್ರಾ ಕಾಡಾ ಅಧ್ಯಕ್ಷರು ಮತ್ತು ಅಧಿಕಾರಿಗಳ ನಿಯೋಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.
ಮಳೆಯಾದಾಗ, ಜಲಾಶಯದಿಂದ ನೀರು ಹರಿಸಿದಾಗ ಎಡದಂಡೆ ನಾಲೆ ತುಂಬಿ ಹರಿಯುತ್ತದೆ. ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ಮಳೆ ನೀರು ಕೂಡ ನಾಲೆಗೆ ಸೇರುತ್ತದೆ. ಹಾಗಾಗಿ ಹೆಚ್ಚಿನ ಪ್ರಮಾಣದ ನೀರು ನಾಲೆಯ ಪಕ್ಕದಲ್ಲಿರುವ ತೋಟ, ಗದ್ದೆ ಮತ್ತು ತೋಟಗಳಿಗೆ ಸಂಪರ್ಕಿಸುವ ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ರೈತರಿಗೆ ತೀವ್ರ ಸಮಸ್ಯೆ ಮತ್ತು ನಷ್ಟವಾಗುತ್ತಿದೆ ಎಂದು ಆರೋಪಿಸಲಾಗಿತ್ತು.

ಜಮೀನಿನಲ್ಲಿ ಮಣ್ಣು ಸವಕಳಿಯಾಗಿ ಬದು ಕುಸಿಯುತ್ತಿದೆ. ಅಡಿಕೆ ಮರಗಳ ಬುಡಗಳು ಮತ್ತು ಭತ್ತದ ಗದ್ದೆಗಳು ಮುಳುಗಡೆಯಾಗಿ ರೈತರಿಗೆ ನಷ್ಟವಾಗುತ್ತಿದೆ. ರಸ್ತೆ ಮೇಲೆ ನೀರು ಹರಿಯುತ್ತಿದೆ. ಮನೆಗಳಿಗು ನೀರು ನುಗ್ಗುತ್ತಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಭದ್ರಾ ಕಾಡಾ ಕಚೇರಿಗೆ ಅಚ್ಚುಕಟ್ಟು ರೈತರು ಮನವಿ ಸಲ್ಲಿಸಿದ್ದರು.
ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಭೂ ಅಭಿವೃದ್ಧಿ ಅಧಿಕಾರಿ ಪ್ರಶಾಂತ್.ಕೆ, ಕಾರ್ಯಪಾಲಕ ಇಂಜಿನಿಯರ್ ಜಿ.ಎಸ್.ಪಟೇಲ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರುದ್ರಸ್ವಾಮಿ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಇಂಜಿನಿಯರ್ ರವಿ ಕುಮಾರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರೈತರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ಇದನ್ನೂ ಓದಿ » ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ? ಯಾವ್ಯಾವ ರೈಲು ಯಾವ ಟೈಮ್ಗೆ ಹೊರಡಲಿದೆ?

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು






