ಉಂಬ್ಳೇಬೈಲು ಬಳಿ ಅಪಘಾತ, ಓರ್ವ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗ: ತಾಲೂಕಿನ ಉಂಬ್ಳೇಬೈಲು ಸಮೀಪದ ಮರಾಠಿ ಕ್ಯಾಂಪ್ ಬಳಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ನಿವಾಸಿ ವಿಜಯೇಂದ್ರ (45) ಮೃತ ದುರ್ದೈವಿ. ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಒಂದು ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ವಿಜಯೇಂದ್ರ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ತುಂಗಾನಗರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Umblebyle-Car-incident-near-marati-camp