ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 DECEMBER 2024
ಹೊಳೆಹೊನ್ನೂರು : ಆರ್ಕೇಸ್ಟ್ರಾ ಕಾರ್ಯಕ್ರಮ ನೋಡಿಕೊಂಡು ಮನೆಗೆ ಮರಳುತ್ತಿದ್ದ ವ್ಯಕ್ತಿಗೆ ಹೊಳೆಹೊನ್ನೂರು ರಸ್ತೆಯಲ್ಲಿ ಕಾರು (Car) ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಹೊಳೆಬೆನವಳ್ಳಿಯ ತಿಮ್ಮಪ್ಪ (54) ಮೃತ ದುರ್ದೈವಿ. ಗ್ರಾಮದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಶುಕ್ರವಾರ ರಾತ್ರಿ ರಾಜ್ಯೋತ್ಸವದ ಅಂಗವಾಗಿ ಆರ್ಕೇಸ್ಟ್ರಾ ಆಯೋಜಿಸಲಾಗಿತ್ತು. ತಿಮ್ಮಪ್ಪ ಅವರು ಕಾರ್ಯಕ್ರಮ ವೀಕ್ಷಿಸಿ ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದು ತಿಮ್ಮಪ್ಪ ಗಂಭೀರ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸುಬ್ಬಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಅವರು ಅಸುನೀಗಿದ್ದಾರೆ.

ಇದನ್ನೂ ಓದಿ » ಭದ್ರಾ ಡ್ಯಾಮ್, ನಾಲೆಯ ಗೇಟ್ ಬಂದ್ ಮಾಡುವಾಗ ಕ್ರೇನ್ನ ಕೇಬಲ್ ಕಟ್
ಇನ್ನು, ಘಟನೆ ಬಳಿ ಚಾಲಕ ಕಾರು ನಿಲ್ಲಿಸಿದೆ ಪರಿಯಾಗಿದ್ದ ಎಂದು ಆರೋಪಿಸಲಾಗಿದೆ. ಗ್ರಾಮಸ್ಥರು ಕಾರನ್ನು ಬೆನ್ನಟ್ಟಿ ಹಿಡಿದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು














