ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021
ಅನುಮತಿ ಪಡೆಯದೆ ಮರಗಳ ಕಡಿತಲೆ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಕಡಿದ ಮರಗಳು ಮತ್ತು ಟ್ರಾಕ್ಟರನ್ನು ವಶಪಡಿಸಿಕೊಳ್ಳಲಾಗಿದೆ.
ಉಂಬ್ಳೇಬೈಲು – ಕೈದೊಟ್ಲು ಗ್ರಾಮಗಳ ನಡುವೆ ಘಟನೆ ಸಂಭವಿಸಿದೆ. ಮರ ಕಡಿಯುತ್ತಿರುವ ಕುರಿತು ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಅನುಮತಿ ಪಡೆಯದೆ ಮರ ಕಡಿಯುತ್ತಿರುವುದು ಬೆಳಕಿಗೆ ಬಂದಿದೆ.
ನಿರಂತರ ಜ್ಯೋತಿ ವಿದ್ಯುತ್ ಮಾರ್ಗಕ್ಕೆ ಕಡಿತಲೆ
ನಿರಂತರ ಜ್ಯೋತಿ ವಿದ್ಯುತ್ ಮಾರ್ಗ ಅಳವಡಿಕೆಯ ಗುತ್ತಿಗೆ ಪಡೆದಿದ್ದ ಖಾಸಗಿ ಸಂಸ್ಥೆ ಈ ಕಡಿತಲೆ ಮಾಡಿಸುತ್ತಿತ್ತು. ಸಂಸ್ಥೆಯು ಈಗಾಗಲೇ ನೂತನ ವಿದ್ಯುತ್ ಮಾರ್ಗವನ್ನು ಎಳೆದಿತ್ತು. ಅದಕ್ಕೆ ತಾಗುತ್ತಿದ್ದ ಮರಗಳನ್ನು ಕಡಿತಲೆ ಮಾಡಲಾಗುತ್ತಿತ್ತು.
ಮರಗಳನ್ನು ಕಡಿತಲೆ ಮಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಪ್ರಶ್ನಿಸಿದಾಗ ಕಾರ್ಮಿಕರು ಸಮರ್ಪಕ ಉತ್ತರ ನೀಡಲಿಲ್ಲ. ಹಾಗಾಗಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿದ್ದಾರೆ. ಈ ವೇಳೆ ಅನುಮತಿ ಇಲ್ಲದಿರುವುದು ಬೆಳಕಿಗೆ ಬಂದಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200