ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 FEBRURARY 2023
SHIMOGA : ತುಂಗಾ ನದಿ ದಂಡೆಯ ಮೇಲೆ ಅಕ್ರಮವಾಗಿ ಮರಳು (sand) ಸಂಗ್ರಹಿಸಿದ್ದ ಆರೋಪ ಸಂಬಂಧ ಸಾಲು ಸಾಲು ಪ್ರಕರಣ ದಾಖಲು ಮಾಡಲಾಗಿದೆ. ವಾರ ಪೂರ್ತಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಕೇಸ್ 1 : ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಂಗ್ರಹ ಮಾಡಲಾಗಿತ್ತು. ಪರವಾನಗಿ ಇಲ್ಲಿದೆ ತುಂಗಾ ನದಿ ಬಲ ದಂಡೆಯ ಮೇಲೆ ಮರಳು ಸಂಗ್ರಹಿಸಿಲಾಗಿತ್ತು. ಈ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು. ಪರಿಶೀಲನೆ ಬಳಿಕ ಇಲಾಖೆ ವತಿಯಿಂದ ಮರಳು ಸಂಗ್ರಹ ಮಾಡಿದವರ ವಿರುದ್ಧ ದೂರು ನೀಡಲಾಗಿದೆ.
ಕೇಸ್ 2 : ಹೊಳೆಹನಸವಾಡಿ ಗ್ರಾಮದ ಬಳಿ ತುಂಗಾ ನದಿಯ ದಂಡೆಯ ಮೇಲೆ ಅನಧಿಕೃತವಾಗಿ ಮರಳು (sand) ಸಂಗ್ರಹ ಮಾಡಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಪರಿಶೀಲನೆ ಬಳಿಕ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.
ಕೇಸ್ 3 : ಸೂಗೂರು ಗ್ರಾಮದ ಸಮೀಪದಲ್ಲೂ ತುಂಗಾ ನದಿ ದಂಡೆ ಮೇಲೆ ಅಕ್ರಮವಾಗಿ ಮರಳು ತೆಗೆದು ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



