ಶಿವಮೊಗ್ಗದ ಕಾಡಿನಲ್ಲಿ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟ ಚಿರತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 DECEMBER 2022

ಶಿವಮೊಗ್ಗ : ಕಾಡು ಪ್ರಾಣಿಗಳ ಬೇಟೆಗೆ (hunters) ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣ ಬಿಟ್ಟಿದೆ. ಮೃತ ಚಿರತೆಯು 5 ರಿಂದ 6 ವರ್ಷದ್ದಾಗಿದೆ ಎಂದು ಅಂದಾಜಿಸಲಾಗಿದೆ.

Shimoga Nanjappa Hospital

ತಾಲೂಕಿನ ಕೋಣೆಹೊಸೂರು ಗ್ರಾಮದ ಕಿರು ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಆಹಾರ ಅರಸುತ್ತ ಬಂದ ಚಿರತೆ ಉರುಳಿಗೆ ಸಿಕ್ಕಿಬಿದ್ದಿದೆ. ಅದರಿಂದ ಬಿಡಿಸಿಕೊಳ್ಳಲು ಬಹು ಹೊತ್ತು ಒದ್ದಾಡಿ ಪ್ರಾಣ ಬಿಟ್ಟಿದೆ.

hunters

ಮರದಲ್ಲಿ ಜೋತಾಡುತ್ತಿದ್ದ ಚಿರತೆ

ಉರುಳಿಗೆ ಸಿಲುಕಿದ ಚಿರತೆ ತಲೆ ಕೆಳಗಾದ ಸ್ಥಿತಿಯಲ್ಲಿ ಮರದಲ್ಲಿ ಜೋತಾಡುತ್ತಿತ್ತು. ಮರವನ್ನು ಹತ್ತಲಾಗದೆ. ಉರುಳಿನಿಂದ ತಪ್ಪಿಸಿಕೊಂಡು ಕೆಳಗೆ ಜಗಿಯಲು ಆಗದೆ ಪರಿತಪಿಸಿದೆ. ಅಲ್ಲದೆ ಕೆಲವು ಹೊತ್ತು ಉರುಳಿನಿಂದ ಬಿಡಿಸಿಕೊಳ್ಳಲು ಯತ್ನಿಸಿದೆ. ಪ್ರಯತ್ನ ಸಫಲವಾಗದೆ ಮರದಲ್ಲಿ ಜೋತಾಡುತ್ತಲೆ ಪ್ರಾಣ ಬಿಟ್ಟಿದೆ.

hunters

ಅರಣ್ಯಾಧಿಕಾರಿಗಳು ದೌಡು

ಚಿರತೆಯೊಂದು ಉರುಳಿಗೆ ಸಿಕ್ಕಿಬಿದ್ದಿದೆ ಎಂಬ ವಿಚಾರ ತಿಳಿಯುತ್ತಿದ್ದ ಹಾಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಚಿರತೆ ಪ್ರಾಣ ಬಿಟ್ಟಿದೆ. ಈ ಹಿನ್ನೆಲೆ ಕಾಡಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದರು. ಅಲ್ಲಿಯೇ ದಹನ ಮಾಡಿದರು.

ಬೇಟೆಗಾರರ ಹಾವಳಿ ಹೆಚ್ಚು

ಈ ಭಾಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಣ್ತಪ್ಪಿಸಿ ವನ್ಯಜೀವಿಗಳ ಬೇಟೆಯಾಡಲಾಗುತ್ತಿದೆ ಎಂಬ ಆರೋಪವಿದೆ. ಬಂದೂಕಿನಿಂದ ಗುಂಡು ಹಾರಿಸಿದರೆ ಶಬ್ದ ಕೇಳುತ್ತದೆ. ಹಾಗಾಗಿ ಯಾರಿಗೂ ಗೊತ್ತಾಗದಂತೆ ಬೇಟೆಯಾಡಲು ಉರುಳು ಕಟ್ಟಲಾಗುತ್ತದೆ. ಪ್ರಾಣಿಗಳು ಸಾಮಾನ್ಯವಾಗಿ ಸಂಚರಿಸುವ ಜಾಗದಲ್ಲಿ ಉರುಳು ಕಟ್ಟುತ್ತಾರೆ. ಕಾಡು ಹಂದಿ ಸೇರಿದಂತೆ ವಿವಿಧ ವನ್ಯಜೀವಿಗಳು ಈ ಉರುಳಿಸಿಗೆ ಸಿಲುಕಿ ಸಾವನ್ನಪ್ಪುತ್ತವೆ. ಚಿರತೆ ಸಾವನ್ನಪ್ಪಿರುವುದರಿಂದ ಬೇಟೆಗಾರರ ಉರುಳು ತಂತ್ರ ಗೊತ್ತಾಗಿದೆ.

[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]

ಸಾಗರ ಎಸಿಎಫ್ ಶ್ರೀಧರ್, ವಲಯ ಅರಣ್ಯಾಧಿಕಾರಿ ಅರವಿಂದ್, ಡಿ.ವೈ.ಆರ್.ಎಫ್.ಒ ದೀಪಕ್ ಸಿಂಗ್, ಸೋಮಶೇಖರ್, ಅಶೋಕ್, ಮುಬಾರಕ್ ಬಾಷಾ, ಗಾರ್ಡ್ ಗಳಾದ ಬಸವರಾಜ, ಮಂಜನಾಥ್ ಮಲ್ಲಾದೊರೆ, ಗ್ರಾಮ ಪಂಚಾಯಿತಿ ಸದಸ್ಯ ಸುದರ್ಶನ ಹಾಜರಿದ್ದರು.

ಇದನ್ನೂ ಓದಿ – ಮತ್ತೆ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಚಳಿ ಪ್ರಮಾಣವು ಹೆಚ್ಚಳ

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 7, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment