Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದ ಕಾಡಿನಲ್ಲಿ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟ ಚಿರತೆ

ಶಿವಮೊಗ್ಗದ ಕಾಡಿನಲ್ಲಿ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟ ಚಿರತೆ

07/12/2022 9:58 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 7 DECEMBER 2022

ಶಿವಮೊಗ್ಗ : ಕಾಡು ಪ್ರಾಣಿಗಳ ಬೇಟೆಗೆ (hunters) ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣ ಬಿಟ್ಟಿದೆ. ಮೃತ ಚಿರತೆಯು 5 ರಿಂದ 6 ವರ್ಷದ್ದಾಗಿದೆ ಎಂದು ಅಂದಾಜಿಸಲಾಗಿದೆ.

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

Shimoga Nanjappa Hospital

ತಾಲೂಕಿನ ಕೋಣೆಹೊಸೂರು ಗ್ರಾಮದ ಕಿರು ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಆಹಾರ ಅರಸುತ್ತ ಬಂದ ಚಿರತೆ ಉರುಳಿಗೆ ಸಿಕ್ಕಿಬಿದ್ದಿದೆ. ಅದರಿಂದ ಬಿಡಿಸಿಕೊಳ್ಳಲು ಬಹು ಹೊತ್ತು ಒದ್ದಾಡಿ ಪ್ರಾಣ ಬಿಟ್ಟಿದೆ.

hunters

ಮರದಲ್ಲಿ ಜೋತಾಡುತ್ತಿದ್ದ ಚಿರತೆ

ಉರುಳಿಗೆ ಸಿಲುಕಿದ ಚಿರತೆ ತಲೆ ಕೆಳಗಾದ ಸ್ಥಿತಿಯಲ್ಲಿ ಮರದಲ್ಲಿ ಜೋತಾಡುತ್ತಿತ್ತು. ಮರವನ್ನು ಹತ್ತಲಾಗದೆ. ಉರುಳಿನಿಂದ ತಪ್ಪಿಸಿಕೊಂಡು ಕೆಳಗೆ ಜಗಿಯಲು ಆಗದೆ ಪರಿತಪಿಸಿದೆ. ಅಲ್ಲದೆ ಕೆಲವು ಹೊತ್ತು ಉರುಳಿನಿಂದ ಬಿಡಿಸಿಕೊಳ್ಳಲು ಯತ್ನಿಸಿದೆ. ಪ್ರಯತ್ನ ಸಫಲವಾಗದೆ ಮರದಲ್ಲಿ ಜೋತಾಡುತ್ತಲೆ ಪ್ರಾಣ ಬಿಟ್ಟಿದೆ.

hunters

ಅರಣ್ಯಾಧಿಕಾರಿಗಳು ದೌಡು

ಚಿರತೆಯೊಂದು ಉರುಳಿಗೆ ಸಿಕ್ಕಿಬಿದ್ದಿದೆ ಎಂಬ ವಿಚಾರ ತಿಳಿಯುತ್ತಿದ್ದ ಹಾಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಚಿರತೆ ಪ್ರಾಣ ಬಿಟ್ಟಿದೆ. ಈ ಹಿನ್ನೆಲೆ ಕಾಡಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದರು. ಅಲ್ಲಿಯೇ ದಹನ ಮಾಡಿದರು.

ಬೇಟೆಗಾರರ ಹಾವಳಿ ಹೆಚ್ಚು

ಈ ಭಾಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಣ್ತಪ್ಪಿಸಿ ವನ್ಯಜೀವಿಗಳ ಬೇಟೆಯಾಡಲಾಗುತ್ತಿದೆ ಎಂಬ ಆರೋಪವಿದೆ. ಬಂದೂಕಿನಿಂದ ಗುಂಡು ಹಾರಿಸಿದರೆ ಶಬ್ದ ಕೇಳುತ್ತದೆ. ಹಾಗಾಗಿ ಯಾರಿಗೂ ಗೊತ್ತಾಗದಂತೆ ಬೇಟೆಯಾಡಲು ಉರುಳು ಕಟ್ಟಲಾಗುತ್ತದೆ. ಪ್ರಾಣಿಗಳು ಸಾಮಾನ್ಯವಾಗಿ ಸಂಚರಿಸುವ ಜಾಗದಲ್ಲಿ ಉರುಳು ಕಟ್ಟುತ್ತಾರೆ. ಕಾಡು ಹಂದಿ ಸೇರಿದಂತೆ ವಿವಿಧ ವನ್ಯಜೀವಿಗಳು ಈ ಉರುಳಿಸಿಗೆ ಸಿಲುಕಿ ಸಾವನ್ನಪ್ಪುತ್ತವೆ. ಚಿರತೆ ಸಾವನ್ನಪ್ಪಿರುವುದರಿಂದ ಬೇಟೆಗಾರರ ಉರುಳು ತಂತ್ರ ಗೊತ್ತಾಗಿದೆ.

CLICK & JOIN – SHIVAMOGGA LIVE COMMUNITY CLICK & JOIN – SHIVAMOGGA LIVE COMMUNITY

ಸಾಗರ ಎಸಿಎಫ್ ಶ್ರೀಧರ್, ವಲಯ ಅರಣ್ಯಾಧಿಕಾರಿ ಅರವಿಂದ್, ಡಿ.ವೈ.ಆರ್.ಎಫ್.ಒ ದೀಪಕ್ ಸಿಂಗ್, ಸೋಮಶೇಖರ್, ಅಶೋಕ್, ಮುಬಾರಕ್ ಬಾಷಾ, ಗಾರ್ಡ್ ಗಳಾದ ಬಸವರಾಜ, ಮಂಜನಾಥ್ ಮಲ್ಲಾದೊರೆ, ಗ್ರಾಮ ಪಂಚಾಯಿತಿ ಸದಸ್ಯ ಸುದರ್ಶನ ಹಾಜರಿದ್ದರು.

ಇದನ್ನೂ ಓದಿ – ಮತ್ತೆ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಚಳಿ ಪ್ರಮಾಣವು ಹೆಚ್ಚಳ

Shimoga Nanjappa Hospital

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Rain-at-Shimoga-Kote-Road ಮತ್ತೆ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಚಳಿ ಪ್ರಮಾಣವು ಹೆಚ್ಚಳ
Next Article HOSANAGARA-TALUK-NEWS-1.jpg ಭತ್ತ ಒಕ್ಕಲು ವೇಳೆ ಯಂತ್ರಕ್ಕೆ ಸಿಲುಕಿ ರೈತನ ಬಲಗೈ ಕಟ್

ಇದನ್ನೂ ಓದಿ

Tree-falls-to-Shimoga-Thirthahalli-Road-at-gajanuru
SHIVAMOGGA

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಗೆ ಉರುಳಿದ ಬೃಹತ್ ಆಲದ ಮರ, ವಾಹನ ಸಂಚಾರಕ್ಕೆ ಅಡಚಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
KUMSI NEWS 1
SHIVAMOGGA

ಕುಂಸಿ ಮೆಸ್ಕಾಂ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆ, ಯಾವಾಗ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Lokayukta-sudden-visit-to-anganavadis
SHIVAMOGGA

ಶಿವಮೊಗ್ಗದ ಅಂಗನವಾಡಿಗಳಿಗೆ ಲೋಕಾಯುಕ್ತರು ದಿಢೀರ್ ಭೇಟಿ, ಪರಿಶೀಲನೆ ವೇಳೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
100625 Bus mishap at bedarahosahalli in Shimoga taluk
SHIVAMOGGA

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹೆದ್ದಾರಿಗೆ ಅಡ್ಡಲಾಗಿ KSRTC ಬಸ್‌ ಪಲ್ಟಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Dr-Amshumanth-visit-near-kachinakatte
SHIVAMOGGA

ಶಿವಮೊಗ್ಗ ವಿಮಾನ ನಿಲ್ದಾಣ, ಎಡದಂಡೆ ನಾಲೆ ನೀರಿನಿಂದ ರೈತರಿಗೆ ಸಂಕಷ್ಟ, ಅಧಿಕಾರಿಗಳು ಭೇಟಿ, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Crime-News-General-Image
BHADRAVATHISHIVAMOGGA

ಶಿರಾಳಕೊಪ್ಪ ಪೊಲೀಸರ ದಾಳಿ 47 ಜಾನುವಾರುಗಳು ವಶಕ್ಕೆ, ಹೊಳೆಹೊನ್ನೂರಿನಲ್ಲಿ ಗೋಮಾಂಸ ಸಾಗಿಸುವಾಗ ರೇಡ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?