ಶಿವಮೊಗ್ಗ: ಹಣಗೆರೆಕಟ್ಟೆ ರಸ್ತೆಯಲ್ಲಿ ತೆರಳುತ್ತಿದ್ದ ಎರಡು ಕಾರುಗಳಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ (Collision) ಹೊಡೆದಿದೆ. ಎರಡು ಕಾರುಗಳು ಎಡಬದಿಯ ಚರಂಡಿಗೆ ಉರುಳಿವೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.
ಶಿವಮೊಗ್ಗದಲ್ಲಿ ಗೃಹಪ್ರವೇಶ ಸಮಾರಂಭಕ್ಕೆ ತೆರಳಿದ್ದ ಎರಡು ಕುಟುಂಬದವರು ಓಮ್ನಿ ಮತ್ತು ಎಕ್ಸ್ಟರ್ ಕಾರುಗಳಲ್ಲಿ ತೀರ್ಥಹಳ್ಳಿಯ ತಮ್ಮೂರಿಗೆ ತೆರಳುತ್ತಿದ್ದರು. ಕರಕುಚ್ಚಿ ಬಳಿ ಎದುರಿನಿಂದ ಬಂದ ಕಾರೊಂದು ಓಮ್ನಿ ಮತ್ತು ಎಕ್ಸ್ಟರ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಎರಡು ಕಾರುಗಳು ರಸ್ತೆಯ ಎಡ ಬದಿಯ ಚರಂಡಿಗೆ ಉರುಳಿವೆ.
ಎರಡು ಕಾರುಗಳಲ್ಲಿ ಇದ್ದ ಅರ್ಜುನ ಡಿ.ರಾವ್, ಶಾರದಮ್ಮ, ಶೇಷಾಚಲ, ನಾಗಭೂಷಣ ರಾವ್, ಎದುರಿನಿಂದ ಬಂದು ಡಿಕ್ಕಿ ಹೊಡೆದ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದರು. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಪಾಕ್ ಮೇಲೆ ದಾಳಿ, ಪಹಲ್ಗಾಮ್ನಲ್ಲಿ ಮೃತರಾದ ರಿಯಲ್ ಎಸ್ಟೇಟ್ ಉದ್ಯಮಿ ತಾಯಿಯ ಮೊದಲ ರಿಯಾಕ್ಷನ್, ಏನಂದ್ರು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200