Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಗದ್ದಲ, ಗೊಂದಲ, ಪೊಲೀಸ್‌ ಮಧ್ಯಪ್ರವೇಶ, ಆಗಿದ್ದೇನು?

ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಗದ್ದಲ, ಗೊಂದಲ, ಪೊಲೀಸ್‌ ಮಧ್ಯಪ್ರವೇಶ, ಆಗಿದ್ದೇನು?

31/08/2023 10:03 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 31 AUGUST 2023

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರಿಗೆ (Farmers) ಇವತ್ತು ಏರ್‌ಪೋರ್ಟ್‌ ಟರ್ಮಿನಲ್‌ನಲ್ಲಿ (Airport Terminal) ಸನ್ಮಾನಿಸಲಾಯಿತು. ಸಾಂಕೇತಿಕವಾಗಿ ಇಬ್ಬರನ್ನು ವೇದಿಕೆಗೆ ಆಹ್ವಾನಿಸಿ ಶಾಲು ಹೊದಿಸಿ ಗೌರವಿಸಲಾಯಿತು. ಆದರೆ ಸನ್ಮಾನಿತರು ಭೂಮಿಯನ್ನು ಕಳೆದುಕೊಂಡ ರೈತರಲ್ಲ ಎಂದು ಕಾರ್ಯಕ್ರಮದಲ್ಲಿದ್ದ ಉಳಿದ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿದ್ದ ಮೊದಲ ವಿಮಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಪ್ರಮುಖ ವಿಚಾರ

ಟರ್ಮಿನಲ್‌ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದ ವೇಳೆ ಕೆಲಕಾಲ ಗೊಂದಲ ಸೃಷ್ಟಿಯಾಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಆದರೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಲ್ಲಿ ಕೃಷ್ಣಪ್ಪ ಮತ್ತು ಗೋವಿಂದರಾಜು ಎಂಬುವವರನ್ನು ಸನ್ಮಾನಿಸಿದರು.

ಇದನ್ನೂ ಓದಿ – ಶಿವಮೊಗ್ಗದ ಮೊದಲ ವಿಮಾನದಲ್ಲಿ 10 ಬೆಳ್ಳಿ ಕಾಯಿನ್‌ ಬಹುಮಾನ, ಯಾರಿಗೆ ವಿತರಿಸಲಾಯಿತು?

ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಗರಂ

ಸನ್ಮಾನ ಸ್ವೀಕರಿಸಲು ಕೃಷ್ಣಪ್ಪ ಮತ್ತು ಗೋವಿಂದರಾಜು ವೇದಿಕೆಗೆ ಆಗಮಿಸುತ್ತಿದ್ದಂತೆ ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ, ಕಾಂಗ್ರೆಸ್‌ ಮುಖಂಡ ವಿಜಯ್‌ ಕುಮಾರ್‌ ಗರಂ ಆದರು. ಅವರು ರೈತರಲ್ಲ (Farmers), ಭೂಮಿಯನ್ನೂ ಕಳೆದುಕೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ವೇದಿಕೆ ಮೇಲೇರಿದರು. ಈ ವೇಳೆ ಪೊಲೀಸರು ವಿಜಯ್‌ ಕುಮಾರ್‌ ಅವರನ್ನು ತಡೆದರು.

Farmers Protest at Shimoga Airport

ಆಕ್ರೋಶ ಹೊರ ಹಾಕಿದ ರೈತರು

ಇತ್ತ ವೇದಿಕೆಯ ಬಲ ಭಾಗದಲ್ಲಿದ್ದ ಉಳಿದ ರೈತರು ಮತ್ತು ಸ್ಥಳೀಯರು ಕೂಡ ವಿಜಯ್ ಕುಮಾರ್‌ ಅವರಿಗೆ ದನಿಗೂಡಿದರು. ಬಿಜೆಪಿ ಕಾರ್ಯಕರ್ತರನ್ನು ಕರೆತಂದು ರೈತರು ಎಂದ ಸನ್ಮಾನಿಸಲಾಗುತ್ತಿದೆ ಎಂದು ಸಿಟ್ಟಾದರು. ‌

ಭೂಮಿ ಕಳೆದುಕೊಂಡ 303 ರೈತರಿಗೆ ಸೈಟು, ಕೆಲಸ ಕೊಡುವ ಭರವಸೆ ನೀಡಿದ್ದರು. ಈ ಹಿಂದಿನ ಶಾಸಕರ ಬಳಿ ಕೇಳಿದಾಗ ರೈತರಿಗೆ ಕೆಲಸ ಕೊಡಲು ಅಸಾಧ್ಯ ಎಂದರು. ಈಗ ಹೌಸ್‌ ಕೀಪಿಂಗ್‌ಗೆ 18 ಮಹಿಳೆಯರನ್ನು ನೇಮಸಿಕೊಂಡಿದ್ದಾರೆ. ಇವರೆಲ್ಲ ಶಿಕಾರಿಪುರದವರು. ಅವರಷ್ಟು ವಿದ್ಯಾರ್ಹತೆ ಇಲ್ಲಿನ ಸ್ಥಳೀಯರಲ್ಲಿ ಇರಲಿಲ್ಲವೆ. ಇವತ್ತು ಇಬ್ಬರನ್ನು ಕರೆದು ಸನ್ಮಾನಿಸಿದ್ದಾರೆ. ಅವರದ್ದು ಒಂದೇ ಕೊಂದು ಕುಂಟೆ ಜಾಗವು ಹೋಗಿಲ್ಲ.ಅರುಣ್‌ ಕುಮಾರ್‌‌.ಎಸ್, ಭೂಮಿ ಕಳೆದುಕೊಂಡವರು

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅರ್ಧ ಗಂಟೆಗೊಂದು KSRTC ಬಸ್‌, ಯಾವ ಸಮಯದಿಂದ ಶುರುವಾಗುತ್ತೆ?

ಭೂಮಿಯನ್ನೇ ಕಳೆದುಕೊಳ್ಳದವರನ್ನು ಕರೆದು ಸನ್ಮಾನ ಮಾಡಿದ್ದಾರೆ. ರೈತ ಮುಖಂಡ ಕೆ.ಟಿ.ಗಂಗಾಧರ್‌, ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ವಿಜಯ್‌ ಕಮಾರ್‌, ವೇದಾ ವಿಜಯ್‌ ಕುಮಾರ್‌ ಅವರಿಗೆ ಸನ್ಮಾನ ಮಾಡಬೇಕಿತ್ತು. ಭೂಮಿ ಕಳೆದುಕೊಂಡ ರೈತರ ಪರವಾಗಿ ಹೋರಾಟ ಮಾಡಿದ್ದು ಅವರು. ಇವತ್ತಿನ ಸನ್ಮಾನವನ್ನು ನಾವು ಖಂಡಿಸುತ್ತೇವೆ.ಗಣೇಶ್‌, ಕಾಚಿನಕಟ್ಟೆ ನಿವಾಸಿ

ಇದನ್ನೂ ಓದಿ – ಶಿವಮೊಗ್ಗದ ಮೊದಲ ವಿಮಾನ, ಲ್ಯಾಂಡಿಂಗ್‌ನಿಂದ ಟೇಕಾಫ್‌ವರೆಗೆ ಏನೇನಾಯ್ತು? ಇಲ್ಲಿದೆ ಪೂರ್ತಿ ಮಾಹಿತಿ

ರೈತರಿಗೆ ಭೇದವಿಲ್ಲ

ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸಂಸದ ರಾಘವೇಂದ್ರ, ರೈತರಿಗೆ ಯಾವುದೆ ಜಾತಿ, ಧರ್ಮ, ಪಕ್ಷದ ಭೇದವಿಲ್ಲ. ಎಲ್ಲರು ರೈತರೆ ಎಂದರು. ಆದರೆ ವೇದಿಕೆ ಮಂದಿದ್ದ ಉಳಿದ ರೈತರು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article KSRTC-Bus-to-Shimoga-Airport-in-Sogane.webp ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅರ್ಧ ಗಂಟೆಗೊಂದು KSRTC ಬಸ್‌, ಯಾವ ಸಮಯದಿಂದ ಶುರುವಾಗುತ್ತೆ?
Next Article Shivamogga Live Today News ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 10 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ

Car-Incident-at-Sagara-road-near-lion-safari.
SHIVAMOGGA

ಶಿವಮೊಗ್ಗದಲ್ಲಿ ಧಗಧಗ ಹೊತ್ತಿ ಉರಿದ ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
tunga-dam-river.
SHIVAMOGGA

ತುಂಗಾ ನಾಲೆಗಳಲ್ಲಿ ನೀರು ಹರಿಸುವ ದಿನಾಂಕ ಪ್ರಕಟ, ಯಾವ ನಾಲೆಯಲ್ಲಿ ಯಾವಾಗ ನೀರು ಹರಿಸಲಾಗುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Ayanur Graphics
SHIVAMOGGA

ಆಯನೂರಿನಲ್ಲಿ ಇಂದು ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಜನಸ್ಪಂದನಾ ಕಾರ್ಯಕ್ರಮ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Bangalore-Based-tempo-traveller-mishap-at-kumsi
SHIVAMOGGA

ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ಅಪಘಾತ, ಮುಂಭಾಗ ನಜ್ಜುಗುಜ್ಜು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/07/2025
Heavy-outflow-from-tunga-dam.
SHIVAMOGGA

ತುಂಗಾ ಜಲಾಶಯದ ಹೊರ ಹರಿವು ಏರಿಕೆ, ಇವತ್ತು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/07/2025
Tunga-Dam-Gajanuru.
SHIVAMOGGA

ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕುಸಿತ, ಹೊರ ಹರಿವು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?