ಶಿವಮೊಗ್ಗ ಲೈವ್.ಕಾಂ | HOLEHONNUR NEWS | 28 ನವೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪುಣ್ಯ ಸ್ನಾನಕ್ಕೆ ಹೆಸರಾದ ಕೂಡಲಿಯಲ್ಲಿ ಮೊಸಳೆ ಆತಂಕ ಶುರುವಾಗಿದೆ. ತುಂಗಾ, ಭದ್ರಾ ನದಿಗಳ ಸಂಗಮ ಸ್ಥಳದಲ್ಲಿ ಮೊಳಸೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಭೀತಿ ಮೂಡಿಸಿದೆ.
ಹೊಳೆ ದಂಡೆ ಮೇಲೆ ಮೊಸಳೆಯೊಂದು ಬಹುಹೊತ್ತು ಕುಳಿತಿತ್ತು. ಸ್ಥಳೀಯರು ಇದರ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೊ ವೈರಲ್ ಆಗಿದೆ.
ಮಳೆ ಮತ್ತು ಜಲಾಶಯದಿಂದ ನೀರು ಬಿಟ್ಟಿದ್ದರಿಂದ ಮೊಸಳೆಗಳು ನೀರಿನ ಜೊತೆಗೆ ತೇಲಿ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೂಡಲಿ ಸುತ್ತಮುತ್ತ ಹೊಳೆ ದಂಡೆ ಮೇಲಿರುವ ಹಲವು ಗ್ರಾಮಸ್ಥರಲ್ಲಿ ಮೊಸಳೆಗಳು ಆತಂಕ ಮೂಡಿಸಿವೆ.
ಮೊಸಳೆ ಕಾಣಿಸಿಕೊಂಡಿರುವ ಹಿನ್ನೆಲೆ ಕೂಡಲಿಯಲ್ಲಿ ಪುಣ್ಯ ಸ್ನಾನಕ್ಕೆ ಬರುವವರು, ಮೀನುಗಾರಿಕೆ, ದನಗಳ ಮೈ ತೊಳೆಯುವುದು, ವಾಹನಗಳನ್ನು ಸ್ವಚ್ಛಗೊಳಿಸುವುದು, ಬಟ್ಟೆ ಒಗೆಯಲು ಬರುವವರು ಹೊಳೆಗೆ ಇಳಿಯುವಾಗ ಮುನ್ನೆಚ್ಚರಿಕೆ ವಹಿಸಬೇಕಿದೆ.
ಫೋಟೊ, ಮಾಹಿತಿ : ಶ್ರೀನಿವಾಸ್ ಅಯ್ಯರ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






