ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOLEHONNUR NEWS | 28 ನವೆಂಬರ್ 2021
ಪುಣ್ಯ ಸ್ನಾನಕ್ಕೆ ಹೆಸರಾದ ಕೂಡಲಿಯಲ್ಲಿ ಮೊಸಳೆ ಆತಂಕ ಶುರುವಾಗಿದೆ. ತುಂಗಾ, ಭದ್ರಾ ನದಿಗಳ ಸಂಗಮ ಸ್ಥಳದಲ್ಲಿ ಮೊಳಸೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಭೀತಿ ಮೂಡಿಸಿದೆ.
ಹೊಳೆ ದಂಡೆ ಮೇಲೆ ಮೊಸಳೆಯೊಂದು ಬಹುಹೊತ್ತು ಕುಳಿತಿತ್ತು. ಸ್ಥಳೀಯರು ಇದರ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೊ ವೈರಲ್ ಆಗಿದೆ.
ಮಳೆ ಮತ್ತು ಜಲಾಶಯದಿಂದ ನೀರು ಬಿಟ್ಟಿದ್ದರಿಂದ ಮೊಸಳೆಗಳು ನೀರಿನ ಜೊತೆಗೆ ತೇಲಿ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೂಡಲಿ ಸುತ್ತಮುತ್ತ ಹೊಳೆ ದಂಡೆ ಮೇಲಿರುವ ಹಲವು ಗ್ರಾಮಸ್ಥರಲ್ಲಿ ಮೊಸಳೆಗಳು ಆತಂಕ ಮೂಡಿಸಿವೆ.
ಮೊಸಳೆ ಕಾಣಿಸಿಕೊಂಡಿರುವ ಹಿನ್ನೆಲೆ ಕೂಡಲಿಯಲ್ಲಿ ಪುಣ್ಯ ಸ್ನಾನಕ್ಕೆ ಬರುವವರು, ಮೀನುಗಾರಿಕೆ, ದನಗಳ ಮೈ ತೊಳೆಯುವುದು, ವಾಹನಗಳನ್ನು ಸ್ವಚ್ಛಗೊಳಿಸುವುದು, ಬಟ್ಟೆ ಒಗೆಯಲು ಬರುವವರು ಹೊಳೆಗೆ ಇಳಿಯುವಾಗ ಮುನ್ನೆಚ್ಚರಿಕೆ ವಹಿಸಬೇಕಿದೆ.
ಫೋಟೊ, ಮಾಹಿತಿ : ಶ್ರೀನಿವಾಸ್ ಅಯ್ಯರ್
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















