SHIMOGA, 24 AUGUST 2024 : ಕಾಡಾನೆ (Wild Elephant) ದಾಳಿಗೆ ಕೃಷಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹನುಮಂತಪ್ಪ, ಮೃತ ದುರ್ದೈವಿ. ಪುರದಾಳು ಗ್ರಾಮ ಸಮೀಪ ಇರುವ ಆಲದೇವರ ಹೊಸೂರು ಗ್ರಾಮ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಜಮೀನಿಗೆ ಹೋಗಿ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇನ್ನು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಎಫ್ಒ ಪ್ರಸನ್ನ ಕೃಷ್ಣ ಪಟಗಾರ್, ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುವಾಗ ಆನೆ ದಾಳಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈಗ ಸ್ಥಳಕ್ಕೆ ತೆರಳುತ್ತಿದ್ದೇನೆ ಎಂದು ತಿಳಿಸಿದರು.
ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಲ್ಲಿ ಶಿಕ್ಷಕ ಅರೆಸ್ಟ್
ಹನುಮಂತಪ್ಪ ಅವರು ಸಂಪತ್ ಕುಮಾರ್ ಎಂಬುವವರ ತೋಟದ ಮನೆಯಲ್ಲಿ ವಾಸವಾಗಿದ್ದರು. ಆಶ್ಫಾಕ್ ಅಹಮದ್ ಖಾನ್ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರು. ಹನುಂತಪ್ಪಗೆ ಪತ್ನಿ, ನಾಲ್ವರು ಮಕ್ಕಳು ಇದ್ದಾರೆ.
ಇದನ್ನೂ ಓದಿ ⇒ MLA ಪುತ್ರನ ಹತ್ಯೆಗೆ ಸ್ಕೆಚ್, ಎಸ್ಪಿ ಮೊದಲ ರಿಯಾಕ್ಷನ್ – 3 ಫಟಾಫಟ್ ನ್ಯೂಸ್
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





