ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 24 AUGUST 2024 : ಕಾಡಾನೆ (Wild Elephant) ದಾಳಿಗೆ ಕೃಷಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ.
ಹನುಮಂತಪ್ಪ, ಮೃತ ದುರ್ದೈವಿ. ಪುರದಾಳು ಗ್ರಾಮ ಸಮೀಪ ಇರುವ ಆಲದೇವರ ಹೊಸೂರು ಗ್ರಾಮ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಜಮೀನಿಗೆ ಹೋಗಿ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇನ್ನು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಎಫ್ಒ ಪ್ರಸನ್ನ ಕೃಷ್ಣ ಪಟಗಾರ್, ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುವಾಗ ಆನೆ ದಾಳಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈಗ ಸ್ಥಳಕ್ಕೆ ತೆರಳುತ್ತಿದ್ದೇನೆ ಎಂದು ತಿಳಿಸಿದರು.
ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಲ್ಲಿ ಶಿಕ್ಷಕ ಅರೆಸ್ಟ್
ಹನುಮಂತಪ್ಪ ಅವರು ಸಂಪತ್ ಕುಮಾರ್ ಎಂಬುವವರ ತೋಟದ ಮನೆಯಲ್ಲಿ ವಾಸವಾಗಿದ್ದರು. ಆಶ್ಫಾಕ್ ಅಹಮದ್ ಖಾನ್ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರು. ಹನುಂತಪ್ಪಗೆ ಪತ್ನಿ, ನಾಲ್ವರು ಮಕ್ಕಳು ಇದ್ದಾರೆ.
ಇದನ್ನೂ ಓದಿ ⇒ MLA ಪುತ್ರನ ಹತ್ಯೆಗೆ ಸ್ಕೆಚ್, ಎಸ್ಪಿ ಮೊದಲ ರಿಯಾಕ್ಷನ್ – 3 ಫಟಾಫಟ್ ನ್ಯೂಸ್
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





