ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 13 AUGUST 2024 : ವಿಶ್ವ ಆನೆ ದಿನಾಚರಣೆ ಶುಭ ಸಂದರ್ಭದಲ್ಲಿ ಶಿವಮೊಗ್ಗ ಸಕ್ರೇಬೈಲು ಆನೆ ಬಿಡಾರದಲ್ಲಿ (Camp) ಸಲಗವೊಂದಕ್ಕೆ ಶಾಸ್ರೋಕ್ತವಾಗಿ ನಾಮಕರಣ ಮಾಡಲಾಯಿತು.
2023ನೇ ನವೆಂಬರ್ 16ರಂದು ಮೂಡಿಗೆರೆ ತಾಲೂಕು ಆಲ್ಲೂರು ಅರಣ್ಯ ವ್ಯಾಪ್ತಿಯಲ್ಲಿ ಸೆರೆ ಸಿಕ್ಕ ಕಾಡಾನೆಯನ್ನು ಶಿಬಿರದಲ್ಲಿ ಪಳಗಿಸಲಾಗಿತ್ತು. ಅಲ್ಪಾವಧಿಯಲ್ಲೆ ಈ ಸಲಗ ಶಿಬಿರದ ಮೆಚ್ಚಿನ ಊರಾನೆಯಾಗಿ ಬದಲಾಗಿದೆ. ಮಾವುತರು ಮತ್ತು ಕಾವಾಡಿಗಳಿಗೆ ವಿಧೇಯನಾಗಿದ್ದ ಸಲಗಕ್ಕೆ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಅಧಿ ಕಾರಿಗಳು ‘ಅಶ್ವತ್ಥಾಮ’ ಹೆಸರಿಟ್ಟರು.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?
ಸೋಮವಾರ ಬೆಳಗ್ಗೆ ಬಿಡಾರದಲ್ಲಿ ಪುರೋಹಿತ ಮಧು ಭಟ್ ಮಂತ್ರ ಘೋಷಣೆ ಮಾಡಿದರೆ, ವನ್ಯ ಜೀವಿ ವಿಭಾಗದ ಡಿಎಫ್ಒ ಪ್ರಸನ್ನಕೃಷ್ಣ ಪಟಗಾರ್ ಅವರು ಸಲಗದ ಕಿವಿಯಲ್ಲಿ ಮೂರು ಬಾರಿ ಅಶ್ವತ್ಥಾಮ ಎಂದು ಕೂಗುವ ಮೂಲಕ ನಾಮಕರಣ ಮಾಡಿದರು. ಬಿಡಾರದಲ್ಲಿ ಈಗ ಮೂರು ಮರಿ ಸೇರಿ 23 ಆನೆಗಳಿವೆ.

ಇದನ್ನೂ ಓದಿ ⇒ ಪುರದಾಳು ರಸ್ತೆಯಲ್ಲಿ ಅಪಘಾತ, ಮಹಿಳೆಯ ಎರಡು ಕಾಲಿನ ಮೂಳೆ ಕಟ್ – ಇಲ್ಲಿದೆ 3 ಫಟಾಫಟ್ ನ್ಯೂಸ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





