SHIMOGA, 13 AUGUST 2024 : ವಿಶ್ವ ಆನೆ ದಿನಾಚರಣೆ ಶುಭ ಸಂದರ್ಭದಲ್ಲಿ ಶಿವಮೊಗ್ಗ ಸಕ್ರೇಬೈಲು ಆನೆ ಬಿಡಾರದಲ್ಲಿ (Camp) ಸಲಗವೊಂದಕ್ಕೆ ಶಾಸ್ರೋಕ್ತವಾಗಿ ನಾಮಕರಣ ಮಾಡಲಾಯಿತು.
2023ನೇ ನವೆಂಬರ್ 16ರಂದು ಮೂಡಿಗೆರೆ ತಾಲೂಕು ಆಲ್ಲೂರು ಅರಣ್ಯ ವ್ಯಾಪ್ತಿಯಲ್ಲಿ ಸೆರೆ ಸಿಕ್ಕ ಕಾಡಾನೆಯನ್ನು ಶಿಬಿರದಲ್ಲಿ ಪಳಗಿಸಲಾಗಿತ್ತು. ಅಲ್ಪಾವಧಿಯಲ್ಲೆ ಈ ಸಲಗ ಶಿಬಿರದ ಮೆಚ್ಚಿನ ಊರಾನೆಯಾಗಿ ಬದಲಾಗಿದೆ. ಮಾವುತರು ಮತ್ತು ಕಾವಾಡಿಗಳಿಗೆ ವಿಧೇಯನಾಗಿದ್ದ ಸಲಗಕ್ಕೆ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಅಧಿ ಕಾರಿಗಳು ‘ಅಶ್ವತ್ಥಾಮ’ ಹೆಸರಿಟ್ಟರು.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?
ಸೋಮವಾರ ಬೆಳಗ್ಗೆ ಬಿಡಾರದಲ್ಲಿ ಪುರೋಹಿತ ಮಧು ಭಟ್ ಮಂತ್ರ ಘೋಷಣೆ ಮಾಡಿದರೆ, ವನ್ಯ ಜೀವಿ ವಿಭಾಗದ ಡಿಎಫ್ಒ ಪ್ರಸನ್ನಕೃಷ್ಣ ಪಟಗಾರ್ ಅವರು ಸಲಗದ ಕಿವಿಯಲ್ಲಿ ಮೂರು ಬಾರಿ ಅಶ್ವತ್ಥಾಮ ಎಂದು ಕೂಗುವ ಮೂಲಕ ನಾಮಕರಣ ಮಾಡಿದರು. ಬಿಡಾರದಲ್ಲಿ ಈಗ ಮೂರು ಮರಿ ಸೇರಿ 23 ಆನೆಗಳಿವೆ.
ಇದನ್ನೂ ಓದಿ ⇒ ಪುರದಾಳು ರಸ್ತೆಯಲ್ಲಿ ಅಪಘಾತ, ಮಹಿಳೆಯ ಎರಡು ಕಾಲಿನ ಮೂಳೆ ಕಟ್ – ಇಲ್ಲಿದೆ 3 ಫಟಾಫಟ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200