ನಾಲ್ಕು ಹಸುಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ರೈತ, ಕಂಪ್ಲೇಂಟ್’ನಲ್ಲಿ ಏನಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 4 ಡಿಸೆಂಬರ್ 2021

ವ್ಯಕ್ತಿಯೊಬ್ಬ ತಾನು ಸಾಕಿರುವ ನಾಲ್ಕು ಹಸುಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಹಸುಗಳು ಹಾಲು ಕೊಡುತ್ತಿಲ್ಲ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಕಂಪ್ಲೇಂಟ್ ಕಾಪಿ ಸ್ವೀಕರಿಸಿದ ಪೊಲೀಸರು, ಆತನಿಗೆ ಬುದ್ದಿ ಹೇಳಿ ಕಳುಹಿಸಿದ್ದಾರೆ.

AVvXsEg7D64eppM2Y2YXBDC80Q2TdBmP2uvjR kzBF IPI

ಹೊಳೆಹೊನ್ನೂರು ಸಮೀಪದ ಗ್ರಾಮವೊಂದರ ರೈತ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ವಿಚಿತ್ರ ದೂರು ದಾಖಲಿಸಿದ್ದಾರೆ. ತಮ್ಮ ಮನೆಯ ಕೊಟ್ಟಿಗೆಯಲ್ಲಿರುವ ನಾಲ್ಕು ಹಸುಗಳ  ವಿರುದ್ಧವೇ ಪ್ರಕರಣ ದಾಖಲಿಸಲು ಮುಂದಾಗಿದ್ದಾನೆ.

ಹಸುಗಳ ವಿರುದ್ಧ ಪ್ರಕರಣವೇಕೆ?

ಹೊಳೆಹೊನ್ನೂರು ಸಮೀಪದ ಗ್ರಾಮವೊಂದರ ರೈತ ತನ್ನ ಹಸುಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾನೆ. ತಾನು ಸಾಕಿದ್ದ ನಾಲ್ಕು ಹಸುಗಳನ್ನು ದಿನ ಬೆಳಿಗ್ಗೆ 8 ಗಂಟೆಯಿಂದ 11 ಗಂಟೆವರೆಗೂ ಹಾಗೂ ಸಂಜೆ 4 ಗಂಟೆಯಿಂದ 6 ಗಂಟೆವರೆಗೂ ತುಂಬಾ ಚೆನ್ನಾಗಿ ಮೇಯಿಸಿಕೊಂಡು ಬರುತ್ತಿದ್ದೇನೆ. ಆದರೆ ಕಳೆದ 4 – 5 ದಿನಗಳಿಂದ ಹಾಲನ್ನು ಕರೆಯಲು ಹೋದರೆ ಆ ಹಸುಗಳು ಹಾಲು ಕೊಡದೆ ಸುಖಸುಮ್ಮನೆ ಕಾಲಿಂದ ಜಾಡಿಸಿ ಒದೆಯುತ್ತಿವೆ ಎಂದು ದೂರಿನಲ್ಲಿ ತಿಳಿಸಿದ್ದಾನೆ.

ಹಸುಗಳು ತನಗೆ ಹಾಗೂ ತನ್ನ ಪತ್ನಿಗೆ ಸರಿಯಾಗಿ ಹಾಲು ಕೊಡುತ್ತಿಲ್ಲ. ಅವುಗಳನ್ನು ಠಾಣೆಗೆ ಕರೆಯಿಸಿ ತಾವಾಗಿಯೇ ಸರಿಯಾಗಿ ಹಾಲು ಕೊಡುಂತೆ ಮಾಡಿ ನ್ಯಾಯ ಒದಗಿಸಿ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗೊಂದಲಕ್ಕೀಡಾದ ಪೊಲೀಸರು

ಹಸುಗಳನ್ನು ಠಾಣೆಗೆ ಕರೆಯಿಸಬೇಕು ಎಂದು ರೈತ ಪಟ್ಟು ಹಿಡಿದಿದ್ದ. ಇದರಿಂದ ಪೊಲೀಸರು ಕೆಲಕಾಲ ಗೊಂದಲಕ್ಕೀಡಾದರು. ರೈತನ ದೂರು ಸ್ವೀಕರಿಸಿದ ಪೊಲೀಸರು, ರೈತನಿಗೆ ತಿಳಿ ಹೇಳಿ ಕಳುಹಿಸಿದ್ದಾರೆ.

shivamogga live subscribe band

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment