ಶಿವಮೊಗ್ಗ ಲೈವ್.ಕಾಂ | HOLEHONNUR NEWS | 4 ಡಿಸೆಂಬರ್ 2021
ವ್ಯಕ್ತಿಯೊಬ್ಬ ತಾನು ಸಾಕಿರುವ ನಾಲ್ಕು ಹಸುಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಹಸುಗಳು ಹಾಲು ಕೊಡುತ್ತಿಲ್ಲ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಕಂಪ್ಲೇಂಟ್ ಕಾಪಿ ಸ್ವೀಕರಿಸಿದ ಪೊಲೀಸರು, ಆತನಿಗೆ ಬುದ್ದಿ ಹೇಳಿ ಕಳುಹಿಸಿದ್ದಾರೆ.
![]() |
ಹೊಳೆಹೊನ್ನೂರು ಸಮೀಪದ ಗ್ರಾಮವೊಂದರ ರೈತ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ವಿಚಿತ್ರ ದೂರು ದಾಖಲಿಸಿದ್ದಾರೆ. ತಮ್ಮ ಮನೆಯ ಕೊಟ್ಟಿಗೆಯಲ್ಲಿರುವ ನಾಲ್ಕು ಹಸುಗಳ ವಿರುದ್ಧವೇ ಪ್ರಕರಣ ದಾಖಲಿಸಲು ಮುಂದಾಗಿದ್ದಾನೆ.
ಹಸುಗಳ ವಿರುದ್ಧ ಪ್ರಕರಣವೇಕೆ?
ಹೊಳೆಹೊನ್ನೂರು ಸಮೀಪದ ಗ್ರಾಮವೊಂದರ ರೈತ ತನ್ನ ಹಸುಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾನೆ. ತಾನು ಸಾಕಿದ್ದ ನಾಲ್ಕು ಹಸುಗಳನ್ನು ದಿನ ಬೆಳಿಗ್ಗೆ 8 ಗಂಟೆಯಿಂದ 11 ಗಂಟೆವರೆಗೂ ಹಾಗೂ ಸಂಜೆ 4 ಗಂಟೆಯಿಂದ 6 ಗಂಟೆವರೆಗೂ ತುಂಬಾ ಚೆನ್ನಾಗಿ ಮೇಯಿಸಿಕೊಂಡು ಬರುತ್ತಿದ್ದೇನೆ. ಆದರೆ ಕಳೆದ 4 – 5 ದಿನಗಳಿಂದ ಹಾಲನ್ನು ಕರೆಯಲು ಹೋದರೆ ಆ ಹಸುಗಳು ಹಾಲು ಕೊಡದೆ ಸುಖಸುಮ್ಮನೆ ಕಾಲಿಂದ ಜಾಡಿಸಿ ಒದೆಯುತ್ತಿವೆ ಎಂದು ದೂರಿನಲ್ಲಿ ತಿಳಿಸಿದ್ದಾನೆ.
ಹಸುಗಳು ತನಗೆ ಹಾಗೂ ತನ್ನ ಪತ್ನಿಗೆ ಸರಿಯಾಗಿ ಹಾಲು ಕೊಡುತ್ತಿಲ್ಲ. ಅವುಗಳನ್ನು ಠಾಣೆಗೆ ಕರೆಯಿಸಿ ತಾವಾಗಿಯೇ ಸರಿಯಾಗಿ ಹಾಲು ಕೊಡುಂತೆ ಮಾಡಿ ನ್ಯಾಯ ಒದಗಿಸಿ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಗೊಂದಲಕ್ಕೀಡಾದ ಪೊಲೀಸರು
ಹಸುಗಳನ್ನು ಠಾಣೆಗೆ ಕರೆಯಿಸಬೇಕು ಎಂದು ರೈತ ಪಟ್ಟು ಹಿಡಿದಿದ್ದ. ಇದರಿಂದ ಪೊಲೀಸರು ಕೆಲಕಾಲ ಗೊಂದಲಕ್ಕೀಡಾದರು. ರೈತನ ದೂರು ಸ್ವೀಕರಿಸಿದ ಪೊಲೀಸರು, ರೈತನಿಗೆ ತಿಳಿ ಹೇಳಿ ಕಳುಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200