ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020
ದೆಹಲಿ ಪ್ರವೇಶಿಸಲು ರೈತರಿಗೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಮತ್ತು ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಹತೊಳಲು, ಕೈಮರದಲ್ಲಿ ಇಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿದ್ದಾರೆ. ರೈತರಿಗೆ ದೆಹಲಿ ಪ್ರವೇಶಿಸಲು ಅವಕಾಶ ನೀಡದೆ ಸೇನೆಯನ್ನು ಬಳಸಿ ತಡೆದಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲ ಅಡೆತಡೆಗಳನ್ನು ಮೀರಿ ರೈತರು ದೆಹಲಿಯತ್ತ ಮುನ್ನುಗ್ಗುತ್ತಿದ್ದಾರೆ. ಹೆದ್ದಾರಿಗಳಲ್ಲಿ ಅಡುಗೆ, ಊಟ ಮಾಡಿ ಚಳವಳಿ ನಡೆಸುತ್ತಿದ್ದಾರೆ. ರೈತರ ಮೇಲೆ ಜಲಫಿರಂಗಿ, ಟಿಯರ್ ಗ್ಯಾಸ್ ಬಳಸಿ, ಲಾಠಿ ಬೀಸಿ ಚಳವಳಿಯನ್ನು ಹತ್ತಿಕ್ಕಲು ಪ್ರಯತ್ನ ನಡೆಸಲಾಗಿದೆ. ರೈತರ ಬೇಡಿಕೆ ಈಡೇರಿಸದೆ ಹೋದರೆ ಡಿಸೆಂಬರ್ 7ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೆದ್ದಾರಿ ತಡೆ ಚಳವಳಿಯಲ್ಲಿ ರಾಜ್ಯ ರೈತ ಸಂಘದ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ, ಟಿ.ಎಂ.ಚಂದ್ರಪ್ಪ, ಈಶಣ್ಣ, ಡಿ.ಹೆಚ್.ರಾಮಚಂದ್ರಪ್ಪ ,ಶಿವಮೂರ್ತಿ, ರವಿ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






