ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 30 ಆಗಸ್ಟ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪರಿಶೀಲನೆ ಹಂತದಲ್ಲಿದ್ದ ಕಡತವನ್ನು ತಹಶೀಲ್ದಾರ್ ಕಚೇರಿಯಿಂದ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ರೈತರೊಬ್ಬರ ವಿರುದ್ಧ ದೂರು ತಾಲೂಕು ಕಚೇರಿ ಶಿರಸ್ತೇದಾರ್ ದೂರು ನೀಡಿದ್ದಾರೆ. ಫೈಲ್ ಕದ್ದೊಯ್ಯುತ್ತಿರುವುದು ಕಚೇರಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪರಿಶೀಲನೆ ಹಂತದಲ್ಲಿದ್ದ ಕಡತವನ್ನು, ದೇವೇಂದ್ರಪ್ಪ ಎಂಬುವವರು ಅಧಿಕಾರಿಗಳ ಗಮನಕ್ಕೆ ಬಾರದ ಹಾಗೆ, ತೆಗೆದುಕೊಂಡು ಹೋಗಿದ್ದಾರೆ. ದೇವೇಂದ್ರಪ್ಪ ಫೈಲ್ ಕೊಂಡೊಯ್ಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಪರಿಶೀಲಿಸಿದ ಬಳಿಕ, ದೇವೇಂದ್ರಪ್ಪ ವಿರುದ್ಧ ಶಿರಸ್ತೇದಾರ್ ಕೃಷ್ಣಮೂರ್ತಿ ಅವರು ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಏನದು ಫೈಲ್, ಅದನ್ನು ಕೊಂಡೊಯ್ದಿದ್ದೇಕೆ?
ಹೊಳಲೂರಿನ ಬೆಳಲಕಟ್ಟೆ ಗ್ರಾಮದ ಜಮೀನೊಂದನ್ನು ಪಾರ್ವತಮ್ಮ ಎಂಬುವವರ ಹೆಸರಿಗೆ ಪಹಣಿ ನಮೂದಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಹೆಚ್ಚುವರಿ ದಾಖಲೆ ಹಾಜರುಪಡಿಸುವಂತೆ ಅಧಿಕಾರಿಗಳು ಸೂಚಿಸಿದ್ದರು. ಪರಿಶೀಲನೆ ಹಂತದಲ್ಲಿದ್ದ ಕಡತವನ್ನು ತಾಲೂಕು ಕಚೇರಿಯಲ್ಲಿ ಶಿರಸ್ತೇದಾರ್ ಟೇಬಲ್ ಮೇಲೆ ಇರಿಸಿದ್ದರು.
ಶಿರಸ್ತೇದಾರ್ ಅವರು ಯಾರು ಇಲ್ಲದ ವೇಳೆ ಕಚೇರಿಗೆ ಬಂದ ದೇವೇಂದ್ರಪ್ಪ ಅವರು ಫೈಲ್ ಕದ್ದೊಯ್ದಿದ್ದಾರೆ. ಅದರಲ್ಲಿದ್ದ ಕೆಲವು ದಾಖಲೆಗಳನ್ನು ತೆಗೆದುಕೊಂಡು, ಉಳಿದ ದಾಖಲೆಗಳ ಫೈಲನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಜರುಪಡಿಸಿದ್ದಾರೆ. ಈ ಮೂಲಕ ಸರ್ಕಾರಿ ಕೆಲಸಕ್ಕೆ ತೊಂದರೆ ಮಾಡಿರುವ ಆರೋಪದ ಮೇಲೆ ದೇವೇಂದ್ರಪ್ಪ ಅವರ ವಿರುದ್ಧ ದೂರು ನೀಡಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





