ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 30 ಆಗಸ್ಟ್ 2019
ಪರಿಶೀಲನೆ ಹಂತದಲ್ಲಿದ್ದ ಕಡತವನ್ನು ತಹಶೀಲ್ದಾರ್ ಕಚೇರಿಯಿಂದ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ರೈತರೊಬ್ಬರ ವಿರುದ್ಧ ದೂರು ತಾಲೂಕು ಕಚೇರಿ ಶಿರಸ್ತೇದಾರ್ ದೂರು ನೀಡಿದ್ದಾರೆ. ಫೈಲ್ ಕದ್ದೊಯ್ಯುತ್ತಿರುವುದು ಕಚೇರಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪರಿಶೀಲನೆ ಹಂತದಲ್ಲಿದ್ದ ಕಡತವನ್ನು, ದೇವೇಂದ್ರಪ್ಪ ಎಂಬುವವರು ಅಧಿಕಾರಿಗಳ ಗಮನಕ್ಕೆ ಬಾರದ ಹಾಗೆ, ತೆಗೆದುಕೊಂಡು ಹೋಗಿದ್ದಾರೆ. ದೇವೇಂದ್ರಪ್ಪ ಫೈಲ್ ಕೊಂಡೊಯ್ಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಪರಿಶೀಲಿಸಿದ ಬಳಿಕ, ದೇವೇಂದ್ರಪ್ಪ ವಿರುದ್ಧ ಶಿರಸ್ತೇದಾರ್ ಕೃಷ್ಣಮೂರ್ತಿ ಅವರು ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಏನದು ಫೈಲ್, ಅದನ್ನು ಕೊಂಡೊಯ್ದಿದ್ದೇಕೆ?
ಹೊಳಲೂರಿನ ಬೆಳಲಕಟ್ಟೆ ಗ್ರಾಮದ ಜಮೀನೊಂದನ್ನು ಪಾರ್ವತಮ್ಮ ಎಂಬುವವರ ಹೆಸರಿಗೆ ಪಹಣಿ ನಮೂದಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಹೆಚ್ಚುವರಿ ದಾಖಲೆ ಹಾಜರುಪಡಿಸುವಂತೆ ಅಧಿಕಾರಿಗಳು ಸೂಚಿಸಿದ್ದರು. ಪರಿಶೀಲನೆ ಹಂತದಲ್ಲಿದ್ದ ಕಡತವನ್ನು ತಾಲೂಕು ಕಚೇರಿಯಲ್ಲಿ ಶಿರಸ್ತೇದಾರ್ ಟೇಬಲ್ ಮೇಲೆ ಇರಿಸಿದ್ದರು.
ಶಿರಸ್ತೇದಾರ್ ಅವರು ಯಾರು ಇಲ್ಲದ ವೇಳೆ ಕಚೇರಿಗೆ ಬಂದ ದೇವೇಂದ್ರಪ್ಪ ಅವರು ಫೈಲ್ ಕದ್ದೊಯ್ದಿದ್ದಾರೆ. ಅದರಲ್ಲಿದ್ದ ಕೆಲವು ದಾಖಲೆಗಳನ್ನು ತೆಗೆದುಕೊಂಡು, ಉಳಿದ ದಾಖಲೆಗಳ ಫೈಲನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಜರುಪಡಿಸಿದ್ದಾರೆ. ಈ ಮೂಲಕ ಸರ್ಕಾರಿ ಕೆಲಸಕ್ಕೆ ತೊಂದರೆ ಮಾಡಿರುವ ಆರೋಪದ ಮೇಲೆ ದೇವೇಂದ್ರಪ್ಪ ಅವರ ವಿರುದ್ಧ ದೂರು ನೀಡಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು













