ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 FEBRUARY 2024
SHIMOGA : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ರೈತರೊಬ್ಬರಿಂದ ನಾಲ್ಕು ಬಾರಿ ತಲಾ 2 ಲಕ್ಷ ರೂ.ನಂತೆ ಒಟ್ಟು 8 ಲಕ್ಷ ರೂ. ಹಣ ಪಡೆದು ವಂಚಿಸಲಾಗಿದೆ. ಕೊನೆಗೆ ಕೆಲಸವು ಇಲ್ಲದೆ, ಹಣವನ್ನು ಹಿಂತಿರುಗಿಸದೆ ಇದ್ದಿದ್ದರಿಂದ ರೈತ ದೂರು ನೀಡಿದ್ದಾರೆ.
ಏನಿದು ಪ್ರಕರಣ?
ಶಿವಮೊಗ್ಗ ಗ್ರಾಮವೊಂದರ ರೈತರೊಬ್ಬರ (ಹೆಸರು, ಊರು ಗೌಪ್ಯ) ಮಗ ಡಿಪ್ಲೋಮಾ ಮುಗಿಸಿದ್ದು ಎಲ್ಲಿಯು ಕೆಲಸ ಸಿಕ್ಕಿರಲಿಲ್ಲ. ಬೆಂಗಳೂರಿನ ಯುವಕನೊಬ್ಬನಿಗೆ ರೈತನ ಊರಿನ ಯುವತಿಯನ್ನು ಮದುವೆ ಮಾಡಿಕೊಡಲಾಗಿತ್ತು. ಆ ಯುವಕ ಮತ್ತು ಆತನ ತಂದೆ ಆಗಾಗ ಊರಿಗೆ ಬರುತ್ತಿದ್ದರಿಂದ ರೈತನಿಗೆ ಪರಿಚಯವಾಗಿದ್ದರು. ರೈತ ತನ್ನ ಮಗನ ವಿಚಾರ ತಿಳಿಸಿದಾಗ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಅವರಿಬ್ಬರು ಭರವಸೆ ನೀಡಿದ್ದರು.
‘ಇನ್ನೇನು ಆರ್ಡರ್ ಆಗಿಯೇ ಬಿಡ್ತು’
ಬೆಂಗಳೂರಿನ ಯುವಕ ಮತ್ತು ಆತನ ತಂದೆ ರೈತನ ಮಗನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮೊದಲ ಬಾರಿ 2019ರಲ್ಲಿ ರೈತನ ಮನೆಯಲ್ಲೆ 2 ಲಕ್ಷ ರೂ. ಹಣ ಪಡೆದಿದ್ದರು ಎಂದು ಆರೋಪಿಸಲಾಗಿದೆ. ಕೆಲ ದಿನದ ಬಳಿಕ ಪುನಃ 2 ಲಕ್ಷ ರೂ. ಹಣ ಪಡೆದಿದ್ದರು. ಕೆಲವೆ ದಿನದಲ್ಲಿ ‘ನಿಮ್ಮ ಮಗನಿಗೆ ನೇಮಕಾತಿ ಆದೇಶ ಬರಲಿದೆ’ ಎಂದು ನಂಬಿಸಿ ಮತ್ತೊಮ್ಮೆ 2 ಲಕ್ಷ ರೂ. ಪಡೆದುಕೊಂಡಿದ್ದರು. ಸ್ವಲ್ಪ ದಿನದ ಬಳಿ ‘ರೈಲ್ವೆ ಇಲಾಖೆಯಲ್ಲಿ ಎಲೆಕ್ಟ್ರಿಕಲ್ ಕೆಲಸ ಸಿಕ್ಕಿದೆ’ ಎಂದು ತಿಳಿಸಿ ಮತ್ತೆ 2 ಲಕ್ಷ ರೂ. ಪಡೆದಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬರಲಿಲ್ಲ ಆದೇಶ, ಹಿಂತಿರುಗಲಿಲ್ಲ ಹಣ
ರೈಲ್ವೆ ಇಲಾಖೆಯಿಂದ ನೇಮಕಾತಿ ಆದೇಶ ಬಾರದ ಹಿನ್ನೆಲೆ ರೈತ, ಬೆಂಗಳೂರಿನ ತಂದೆ, ಮಗನನ್ನು ಪ್ರಶ್ನಿಸಿದ್ದಾರೆ. ಆಗ ಅವರು ಹಣ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದರು. ಆದರೆ ಬಹು ಸಮಯ ಕಾದರೂ 8 ಲಕ್ಷ ರೂ. ಹಣ ಮರಳಿಸಲಿಲ್ಲ. ಈ ಹಿನ್ನೆಲೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಮೆಗ್ಗಾನ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ನೂತನ ಜಿಲ್ಲಾಧಿಕಾರಿ, ಏನೆಲ್ಲ ಪರಿಶೀಲಿಸಿದರು?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






