SHIVAMOGGA LIVE NEWS | 10 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
KUMSI : ಒಂದೇ ಜಮೀನಿನಲ್ಲಿ ಎರಡು ಬಾರಿ ಶುಂಠಿ ಕಳ್ಳತನವಾಗಿದೆ. ಬೆಳೆಗಾರ ಇಲ್ಲದ ಸಂದರ್ಭ ಗಮನಿಸಿ 9 ಕ್ವಿಂಟಾಲ್ ಶುಂಠಿ ಕಳವು ಮಾಡಿರುವ ಶಂಕೆ ಇದೆ ಎಂದು ಆರೋಪಿಸಲಾಗಿದೆ. ಹಿಟ್ಟಗೊಂಡನಕೊಪ್ಪ ಗ್ರಾಮದಲ್ಲಿ ಜಮೀನು ಗುತ್ತಿಗೆ ಪಡೆದು ಕುಂಸಿಯ ದೇವೇಂದ್ರ ಎಂಬುವವರು ಶುಂಠಿ ಬೆಳೆದಿದ್ದರು. ನಿತ್ಯ ಜಮೀನಿಗೆ ಹೋಗಿ ಬರುತ್ತಿದ್ದರು.
ಏಪ್ರಿಲ್ 29ರ ರಾತ್ರಿ ಜಮೀನಿನಲ್ಲಿ ಬೆಳೆದಿದ್ದ ಸುಮಾರು 7 ಕ್ವಿಂಟಾಲ್ ಶುಂಠಿ ಕಳವು ಮಾಡಲಾಗಿತ್ತು. ಈ ಹಿನ್ನೆಲೆ ರಾತ್ರಿ ವೇಳೆ ಜಮೀನಿನಲ್ಲಿ ದೇವೇಂದ್ರ ಕಾವಲು ಕಾಯಲು ಆರಂಭಿಸಿದರು. ಮೇ 4ರಂದು ಮದುವೆ ಸಮಾರಂಭಕ್ಕೆ ದೇವೇಂದ್ರ ತೆರಳಿದ್ದರು. ಆ ರಾತ್ರಿ ನಾಲ್ಕು ಚೀಲ ಶುಂಠಿ ಕಳುವಾಗಿತ್ತು. ಬೆಳೆಗಾರ ಇಲ್ಲದ ಸಂದರ್ಭವನ್ನೆ ಗಮನಿಸಿ 92 ಸಾವಿರ ರೂ. ಮೌಲ್ಯದ ಶುಂಠಿ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಆಗುಂಬೆ ಬಳಿ ಅಪಘಾತ, ಒಬ್ಬ ಸಾವು, ಕ್ಯಾಂಟರ್ ಜಖಂ
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






