SHIVAMOGGA LIVE | 30 MAY 2023
SHIMOGA : ಕಾಲೇಜು (College) ಸೇರುವ ಕನಸಿನೊಂದಿಗೆ ತೆರಳುತ್ತಿದ್ದ ಯುವತಿ ಪಾಲಿಗೆ ಅದೇ ಕೊನೆಯ ಸವಾರಿಯಾಯಿತು. ಮಗಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಉನ್ನತ ಸ್ಥಾನದಲ್ಲಿ ನೋಡಬೇಕು ಎಂಬ ಹಂಬಲ ಹೊತ್ತಿದ್ದ ತಂದೆಯ ಕನಸಿಗೆ ಟಿಪ್ಪರ್ ಲಾರಿ ಮಣ್ಣೆರಚಿತು. ಪಿಳ್ಳಂಗೆರೆ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ್ದು, ತಂದೆ ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡದಿದೆ. ಘಟನೆಯಲ್ಲಿ ಅರಕೆರೆ ಗ್ರಾಮದ ಐಶ್ವರ್ಯಾ (16) ಸ್ಥಳದಲ್ಲೆ ಮೃತಪಟ್ಟಿದ್ದಾಳೆ. ಆಕೆಯ ತಂದೆ ಜಯಪ್ರಕಾಶ್ ಗಾಯಗೊಂಡಿದ್ದು, ಸರ್ಜಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೇಗಾಯ್ತು ಅಪಘಾತ?
ಜಯಪ್ರಕಾಶ್ ಮತ್ತು ಐಶ್ವರ್ಯ ಅರೆಕರೆ ಗ್ರಾಮದಿಂದ ಶಿವಮೊಗ್ಗಕ್ಕೆ ಸ್ಪ್ಲೆಂಡರ್ ಪ್ಲಸ್ ಬೈಕಿನಲ್ಲಿ ತೆರಳುತ್ತಿದ್ದರು. ಪಿಳ್ಳಂಗೆರೆ ಗ್ರಾಮದ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ರಸ್ತೆಯ ಎಡ ಭಾಗದಲ್ಲಿ ಚಲಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕಿನಲ್ಲಿದ್ದ ಇಬ್ಬರು ಕೆಳಗೆ ಬಿದ್ದಿದ್ದಾರೆ. ಐಶ್ವರ್ಯಾಳ ತಲೆ ಮೇಲೆ ಲಾರಿ ಟೈರ್ ಹತ್ತಿದೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಜಯಪ್ರಕಾಶ್ ಅವರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆ ಸಾವು
ಕಾಲೇಜು ಸೇರುವ ಕನಸಿನಲ್ಲಿದ್ದಳು
ಎಸ್ಸೆಸ್ಸೆಲ್ಸಿ ಪಾಸಾಗಿದ್ದ ಅರೆಕೆರೆಯ ಐಶ್ವರ್ಯ ಶಿವಮೊಗ್ಗದ ಕಾಲೇಜು (College) ಸೇರುವ ಕನಸಿನಲ್ಲಿದ್ದಳು. ತಂದೆ ಜಯಪ್ರಕಾಶ್ ಅವರು ಮಗಳನ್ನು ಶಿವಮೊಗ್ಗದ ಡಿವಿಎಸ್ ಕಾಲೇಜಿಗೆ ಸೇರಿಸುವ ನಿರ್ಧಾರ ಮಾಡಿದ್ದರು. ಸೋಮವಾರ ಮಧ್ಯಾಹ್ನ ಡಿವಿಎಸ್ ಕಾಲೇಜಿಗೆ ಅಡ್ಮಿಷನ್ ಮಾಡಿಸಲು ಬೈಕಿನಲ್ಲಿ ಮಗಳನ್ನು ಕರೆದೊಯ್ಯುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200