ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕುಂಸಿ ಗ್ರಾಮದ ಕನಕ ನಗರದಲ್ಲಿರುವ ಮನೆಯೊಂದರಲ್ಲಿ ಕಳ್ಳತನ ನಡೆದಿದೆ. ಎಲೆಕ್ಟ್ರಿಷಿಯನ್ ಸಮೀಉಲ್ಲಾ ಅವರ ಮನೆಯಲ್ಲಿ ಕಳ್ಳತನವಾಗಿದೆ (GOLD).
ಇದನ್ನೂ ಓದಿ » ₹1.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ, ಎಲ್ಲಿ? ಹೇಗಾಯ್ತು ಘಟನೆ?
ಜನವರಿ 3ರಂದು ಸಮೀಉಲ್ಲಾ ಮತ್ತು ಅವರ ಮಗ ಕೆಲಸಕ್ಕೆ ಹೋಗಿದ್ದರು. ಮಗಳು ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನದ ಹೊತ್ತಿಗೆ ಪತ್ನಿಯೂ ಮದುವೆ ಸಮಾರಂಭಕ್ಕೆ ಹೋಗಿದ್ದರು. ಸಂಜೆ ಮಗಳು ಕಾಲೇಜಿನಿಂದ ಮನೆಗೆ ವಾಪಸ್ ಬಂದು ನೋಡಿದಾಗ ಮನೆಯ ಹಂಚುಗಳನ್ನು ತೆಗೆದಿರುವುದು ಗಮನಕ್ಕೆ ಬಂದಿದೆ. ಒಳಗೆ ಬೀರುವಿನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು ಎಂದು ಆರೋಪಿಸಲಾಗಿದೆ.
ಬೀರುವಿನಲ್ಲಿದ್ದ ಒಂದು ಜೊತೆ ಓಲೆ, ಮೂರು ಉಂಗುರಗಳು ಸೇರಿ ಅಂದಾಜು ₹1,40,000 ಮೌಲ್ಯದ ಸುಮಾರು 19 ಗ್ರಾಂ ತೂಕದ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕುಂಸಿ ಠಾಣಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






