ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 FEBRUARY 2023
SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಸರ್ಕಾರಿ ನೌಕರರ (Government Employees) ಸಂಘದ ವತಿಯಿಂದ ಹುಲಿಯೊಂದನ್ನು ದತ್ತು ಪಡೆಯಲಾಗಿದೆ. ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಪದಾಧಿಕಾರಿಗಳು ಹುಲಿ ಮತ್ತು ಸಿಂಹಧಾಮಕ್ಕೆ ಭೇಟಿ ನೀಡಿ, ದತ್ತು ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸಿದರು.

ಒಂದು ವರ್ಷದ ಅವಧಿಗೆ ಹುಲಿಯೊಂದನ್ನು ದತ್ತು ಪಡೆಯಲಾಗಿದೆ. ಇದಕ್ಕಾಗಿ 2 ಲಕ್ಷ ರೂ. ಪಾವತಿಸಲಾಗಿದೆ. ಈ ಹಿಂದೆ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಒಂದು ಚಿರತೆಯನ್ನು ದತ್ತು ಪಡೆಯಲಾಗಿತ್ತು ಎಂದು ಸಿ.ಎಸ್.ಷಡಾಕ್ಷರಿ ತಿಳಿಸಿದರು.
ದತ್ತು ಪಡೆಯೋದು ಹೇಗೆ?
ಹುಲಿ ಮತ್ತು ಸಿಂಹಧಾಮದಲ್ಲಿ ಪ್ರಾಣಿಗಳ ದುತ್ತು ಪಡೆಯುವ ವಿವಿಧ ಯೋಜನೆಗಳಿವೆ. ಹುಟ್ಟುಹಬ್ಬ ಅಥವಾ ಇತರೆ ಸ್ಮರಣೀಯ ದಿನಗಳಂದು ಸಾರ್ವಜನಿಕರು ಪ್ರಾಣಿಗಳನ್ನು ದತ್ತು ಪಡೆಯಲು ಅವಕಾಶವಿದೆ. ಪ್ರಾಣಿಗಳ ಒಂದು ದಿನದ ಆಹಾರ ವ್ಯವಸ್ಥೆ ಮಾಡುವುದು, ಡೊನೇಷನ್ ನೀಡುವ ವಿವಿಧ ಯೋಜನೆಗಳಿವೆ. ಆಸಕ್ತರು ಹುಲಿ ಮತ್ತು ಸಿಂಹಧಾಮದಲ್ಲಿಯೇ ಇರುವ ಆಡಳಿತ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು. (Government Employees)
ಇದನ್ನೂ ಓದಿ – ವಾಹನ ಡಿಕ್ಕಿಯಾಗಿ ಬಿದ್ದು ನರಳಾಡುತ್ತಿದ್ದ ಜಿಂಕೆಗೆ ನೆರವಾದ ಜನ, ಫೋಟೊಗಳು VIRAL
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



