ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JANUARY 2023
ಹೊಳೆಹೊನ್ನೂರು : ಇಲ್ಲಿನ ಸಿದ್ಲಿಪುರ ಗ್ರಾಮದಲ್ಲಿ ಸರ್ಕಾರಿ ಬಸ್ (government bus) ಸೇವೆಗೆ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಚಾಲನೆ ನೀಡಿದರು. ಇದೆ ವೇಳೆ ಮಾತನಾಡಿದ ಅವರು, ಕೊರೋನ ಲಾಕ್ ಡೌನ್ ಹಿನ್ನೆಲೆ ಖಾಸಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಬಸ್ ಸಂಚಾರ ಪುನಾರಂಭಗೊಳ್ಳಲಿಲ್ಲ ಎಂದರು.
ಬಸ್ ಗಳು ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳುವುದು ಕಷ್ಟವಾಗುತ್ತಿದೆ. ಸಾರ್ವಜನಿಕರು ಪರದಾಡುವಂತಾಗಿದೆ. ಇದೆ ಕಾರಣಕ್ಕೆ ಎಲ್ಲೆಲ್ಲಿ ಬಸ್ ಸೇವೆ ಇಲ್ಲವೊ ಆ ಊರುಗಳಿಗೆ ಸರ್ಕಾರಿ ಬಸ್ (government bus) ಬಿಡಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ – ದುರ್ಗಿಗುಡಿಯಲ್ಲಿ ಕಾರಿನಲ್ಲಿದ್ದ ಮೊಬೈಲ್ ಸ್ಪೋಟ, ಚಾಲಕನ ಸೀಟಿಗೆ ಬೆಂಕಿ
ಸಾರಿಗೆ ಸಂಸ್ಥೆಯ ಸಹಾಯಕ ಸಂಚಾರ ಅಧೀಕ್ಷಕ ಡಿ.ಸಿ.ರೇಣುಕಾನಂದ, ಬಸ್ ಚಾಲಕ ಹೆಚ್.ಬಿ.ಸಿದ್ದೇಶ್, ನಿರ್ವಾಹಕ ಕೆ.ಮಲ್ಲೇಶ್, ಬಿಜೆಪಿ ಮುಖಂಡ ಎಸ್.ಶ್ರೀನಿವಾಸ್, ಪರಮೇಶ್ವರಪ್ಪ ಗೌಡ, ಎಂ.ಮಲ್ಲೇಶಪ್ಪ, ಜಿ.ಎನ್.ರಂಗಪ್ಪ, ನಾಗರತ್ನ, ಕಲ್ಪನಾ ಸೇರಿದಂತೆ ಹಲವರು ಇದ್ದರು.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – OUR WHATSAPP GROUP














