ಹೊಳಲೂರು ಬಳಿ ಅಪಘಾತ, ಒಂದೇ ಕುಟುಂಬದ ಮೂವರಿಗೆ ಗಂಭೀರ ಗಾಯ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಹೊಳಲೂರು ಗ್ರಾಮದ ಹರಮಘಟ್ಟ ಕ್ರಾಸ್ ಬಳಿ ಟ್ರಾಕ್ಟರ್ (Tractor) ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ರಾಕ್ಟರ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಘಟನೆಗೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ರುದ್ರಪ್ಪ, ತಮ್ಮ ಹೆಂಡತಿ ರೇಣುಕಮ್ಮ ಮತ್ತು ಸೊಸೆ ಅಕ್ಷತಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಹೊಳಲೂರು ಕಡೆಯಿಂದ ಬರುತ್ತಿದ್ದರು. ಈ ವೇಳೆ ಹರಮಘಟ್ಟ ಕ್ರಾಸ್ ಬಳಿ ಎದುರಿನಿಂದ ಬಂದ ಟ್ರಾಕ್ಟರ್ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ – ಮಹಿಳೆಯರೆ ಹುಷಾರ್‌, ಶಿವಮೊಗ್ಗದಲ್ಲಿ ಡಬ್ಬಿ ಚಮತ್ಕಾರ, ಮರಳಾದರೆ ಚಿನ್ನಾಭರಣವೇ ಮಾಯ, ಏನಿದು?

ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಮೂವರೂ ರಸ್ತೆಗೆ ಬಿದ್ದು ಕೈಕಾಲು ಮತ್ತು ಮುಖಕ್ಕೆ ತೀವ್ರ ಸ್ವರೂಪದ ಗಾಯವಾಗಿದೆ. ಗಾಯಾಳುಗಳನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸೊಸೆ ಅಕ್ಷತಾ ಅವರನ್ನು ಖಾಸಗಿ ಆಸ್ಪತ್ರೆಯ ಐಸಿಯು ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಟ್ರಾಕ್ಟರ್‌ ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-COLLEGE-ADVT.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment