ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2024
HOLEHONNURU : ಶ್ರೀಕ್ಷೇತ್ರ ಕೂಡ್ಲಿ ಗ್ರಾಮದ ಸಂಗಮ ಸ್ಥಳದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಹೊಳೆ ಜಾತ್ರೆ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ವಿವಿಧೆಡೆಯ ಸಾವಿರಾರು ಭಕ್ತರು ತುಂಗಾ, ಭದ್ರಾ ಸಂಗಮ ಸ್ಥಳದಲ್ಲಿ ಮಿಂದೆದ್ದು ಪುನೀತರಾದರು.
ಏನಿದು ಹೊಳೆ ಮಹೋತ್ಸವ?
ಯುಗಾದಿ ಹಬ್ಬದ ಮರು ದಿನ ಕೂಡ್ಲಿ ಗ್ರಾಮದ ತುಂಗಾ ಹಾಗೂ ಭದ್ರಾ ನದಿ ಸಂಗಮದಲ್ಲಿ ಜಾತ್ರೆ ನಡೆಯಲಿದೆ. ಸುತ್ತಮುತ್ತಲ ಗ್ರಾಮಗಳ ದೇವರಿಗೆ ವಿವಿಧ ಪುಷ್ಪಾಲಂಕಾರ ಹಾಗೂ ವಿದ್ಯುತ್ ದೀಪಾಲಂಕಾರ ಮಾಡಿ ತಮಟೆ, ಡೋಲು, ಡೊಳ್ಳು, ಜುಂಜುಂ ಮೇಳ ಇಂತಹ ನಾನಾ ವಾದ್ಯಗಳೊಂದಿಗೆ ಹೊಳೆ ಜಾತ್ರೆಗೆ ಕರೆದೊಯ್ಯಲಾಗುತ್ತದೆ. ಸಂಗಮೇಶ್ವರ ದೇವರ ಸನ್ನಿಧಿಯಲ್ಲಿ ಪುಣ್ಯ ತೀರ್ಥ ಅಭಿಷೇಕ, ಮಂಗಳಾರತಿ ಮಾಡಿಸಿ ವಿಜೃಂಭಣೆಯ ಮೆರವಣಿಗೆ ನಡೆಸಲಾಗುತ್ತದೆ.
ನವ ಸಂವತ್ಸರದ ಮೊದಲ ಹಬ್ಬ
ಸುಗ್ಗಿಕಾಲ ಮುಗಿದು ಹೊಸ ಸಂವತ್ಸರ ಮೊದಲ ಹಬ್ಬವಾಗಿರುವುದರಿಂದ ರೈತರು ಉತ್ಸಾಹದಿಂದ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕುಟುಂಬದೊಂದಿಗೆ ಜಾತ್ರೆಗೆ ಬಂದು ಸುತ್ತಾಟ ನಡೆಸಿದರು. ಸಂಗಮ ಸ್ಥಳದಿಂದ ಹೊಳೆ ಜಾತ್ರೆ ನಡೆಯುವ ಸ್ಥಳಕ್ಕೆ ಉಕ್ಕಡದಲ್ಲಿ ಜನರು ತೆರಳಿ ಜಾತ್ರೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಪೂಜೆ, ನಾಳೆ ರಂಜಾನ್ಗೆ ಸಿದ್ಧತೆ
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






