SHIVAMOGGA LIVE NEWS | HOME MINISTER | 07 ಮೇ 2022
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇತ್ತು ಮತ್ತೂರು ಗ್ರಾಮಕ್ಕೆ ಭೇಟಿ ನೀಡಿದ್ದರು. ಕಳೆದ ಸೂಳೆಬೈಲಿನಲ್ಲಿ ಕಾರು ಗಾಜು ಒಡೆದು ಪ್ರಕರಣ ಸಂಬಂಧ ಸ್ಥಳೀಯರಿಂದ ಮಾಹಿತಿ ಪಡೆದರು. ಮತ್ತೂರಿನ ಪ್ರಮುಖರೊಂದಿಗೆ ಗೃಹ ಸಚಿವರು ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಮಚ್ಚು ಲಾಂಗು ಹಿಡಿದು ಒಂದು ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಮಾಹಿತಿ ಗೊತ್ತಾದ ಅರ್ಧ ಗಂಟೆಯೊಳಗೆ ಪೊಲೀಸರು ಅಪರಾಧಿಗಳನ್ನು ಬಂಧಿಸಿದ್ದಾರೆ.
ಹರ್ಷ ಕೊಲೆ ಬಳಿಕ ಒಂದಿಲ್ಲೊಂದು ದಾಳಿ
ಹರ್ಷನ ಕೊಲೆ ಬಳಿಕ ವಾರಕ್ಕೆ ಒಂದೆರಡು ಘಟನೆಗಳು ನಡೆಯುತ್ತಿವೆ. ಕುಡಿತ ಮತ್ತು ಗಾಂಜಾ ಅಮಲಿನಲ್ಲಿ ಇಂತಹ ಕೃತ್ಯ ಎಸಗುತ್ತಿದ್ದಾರೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಮತಾಂಧತೆ ಹಿನ್ನೆಲೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ. ಯಾವೆಲ್ಲ ಕಾನೂನು ಕ್ರಮ ಕೈಗೊಳ್ಳಬೇಕೋ ಅದನ್ನು ಪೊಲೀಸರು ಕೈಗೊಂಡಿದ್ದಾರೆ. ನಾನು ಕೂಡ ವರದಿ ತೆಗೆದುಕೊಂಡಿದ್ದೇನೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.
ಇನ್ನು, ಶಿವಮೊಗ್ಗ ಪೊಲೀಸ್ ವ್ಯವಸ್ಥೆಯಲ್ಲಿ ಒಂದಷ್ಟು ಬದಲಾವಣೆ ಮಾಡಿದ್ದೇವೆ. ಈಗ ಇರುವ ಸಿಬ್ಬಂದಿಗಳು ತುರ್ತು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.
ಇದನ್ನೂ ಓದಿ – ಕಲ್ಲು ಬಿದ್ದ ಕಾರಿನಲ್ಲಿ ಬಿಜೆಪಿ ಮುಖಂಡ ಹರಿಕೃಷ್ಣ ಇದ್ದರಾ? | 5 ಪಾಯಿಂಟ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200