ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | HOME MINISTER | 07 ಮೇ 2022
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇತ್ತು ಮತ್ತೂರು ಗ್ರಾಮಕ್ಕೆ ಭೇಟಿ ನೀಡಿದ್ದರು. ಕಳೆದ ಸೂಳೆಬೈಲಿನಲ್ಲಿ ಕಾರು ಗಾಜು ಒಡೆದು ಪ್ರಕರಣ ಸಂಬಂಧ ಸ್ಥಳೀಯರಿಂದ ಮಾಹಿತಿ ಪಡೆದರು. ಮತ್ತೂರಿನ ಪ್ರಮುಖರೊಂದಿಗೆ ಗೃಹ ಸಚಿವರು ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಮಚ್ಚು ಲಾಂಗು ಹಿಡಿದು ಒಂದು ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಮಾಹಿತಿ ಗೊತ್ತಾದ ಅರ್ಧ ಗಂಟೆಯೊಳಗೆ ಪೊಲೀಸರು ಅಪರಾಧಿಗಳನ್ನು ಬಂಧಿಸಿದ್ದಾರೆ.
ಹರ್ಷ ಕೊಲೆ ಬಳಿಕ ಒಂದಿಲ್ಲೊಂದು ದಾಳಿ
ಹರ್ಷನ ಕೊಲೆ ಬಳಿಕ ವಾರಕ್ಕೆ ಒಂದೆರಡು ಘಟನೆಗಳು ನಡೆಯುತ್ತಿವೆ. ಕುಡಿತ ಮತ್ತು ಗಾಂಜಾ ಅಮಲಿನಲ್ಲಿ ಇಂತಹ ಕೃತ್ಯ ಎಸಗುತ್ತಿದ್ದಾರೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಮತಾಂಧತೆ ಹಿನ್ನೆಲೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ. ಯಾವೆಲ್ಲ ಕಾನೂನು ಕ್ರಮ ಕೈಗೊಳ್ಳಬೇಕೋ ಅದನ್ನು ಪೊಲೀಸರು ಕೈಗೊಂಡಿದ್ದಾರೆ. ನಾನು ಕೂಡ ವರದಿ ತೆಗೆದುಕೊಂಡಿದ್ದೇನೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.
ಇನ್ನು, ಶಿವಮೊಗ್ಗ ಪೊಲೀಸ್ ವ್ಯವಸ್ಥೆಯಲ್ಲಿ ಒಂದಷ್ಟು ಬದಲಾವಣೆ ಮಾಡಿದ್ದೇವೆ. ಈಗ ಇರುವ ಸಿಬ್ಬಂದಿಗಳು ತುರ್ತು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.
ಇದನ್ನೂ ಓದಿ – ಕಲ್ಲು ಬಿದ್ದ ಕಾರಿನಲ್ಲಿ ಬಿಜೆಪಿ ಮುಖಂಡ ಹರಿಕೃಷ್ಣ ಇದ್ದರಾ? | 5 ಪಾಯಿಂಟ್ ನ್ಯೂಸ್
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





