ಆಯನೂರು: ಕುಟುಂಬದವರೆಲ್ಲ ಶಿಕಾರಿಪುರದಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭ ಮನೆ ಬಾಗಿಲಿನ ಬೀಗ (Lock) ಮುರಿದು ನಗದು, ಚಿನ್ನಾಭರಣ ಸೇರಿ ಹಲವು ವಸ್ತುಗಳನ್ನು ಕಳವು ಮಾಡಲಾಗಿದೆ. ಆಯನೂರಿನ ಬಸವೇಶ್ವರ ದೇವಸ್ಥಾನದ ಮುಂಭಾಗದ ನೂರುಲ್ಲಾ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ನೂರುಲ್ಲಾ ಅವರು ಕುಟುಂಬದ ಸಹಿತ ಶಿಕಾರಿಪುರಕ್ಕೆ ತೆರಳಿದ್ದರು. ಬೆಳಗಿನ ಜಾವ ಪಕ್ಕದ ಮನೆಯವರು ಕರೆ ಮಾಡಿ ಮಾಹಿತಿ ನೀಡಿದ್ದರು. ಮನೆಗೆ ಹಿಂತಿರುಗಿ ಪರಿಶೀಲಿಸಿದಾಗ ಚಿನ್ನದ ಸರ, ವೈಫೈ ಕನೆಕ್ಟರ್, ವಿವೋ ಮೊಬೈಲ್ ಫೋನ್, 50 ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.
ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್, ವಾಪಸ್ ಬಂದಾಗ ಕಾದಿತ್ತು ಶಾಕ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200