ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೇ ಪತ್ನಿಗೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಶಿವಮೊಗ್ಗದ ದುಮ್ಮಳ್ಳಿಯಲ್ಲಿ (DUMMALLI) ಘಟನೆ ಸಂಭವಿಸಿದೆ.
.png)
ಬುಳ್ಳಾಪುರದ ಅಮಿತಾ (27) ಮೃತಳು. ಈಕೆಯ ಪತಿ ದುಮ್ಮಳ್ಳಿಯ (DUMMALLI) ಕರುಣಾಕರ (36) ಎಂಬಾತ ಹತ್ಯೆ ಮಾಡಿದವನು.
ಹೇಗಾಯ್ತು ಘಟನೆ? DUMMALLI
ಮನೆಯಲ್ಲಿ ಯಾರೂ ಇರದ ವೇಳೆ ಗಂಡ, ಹೆಂಡತಿ ನಡುವೆ ಜಗಳವಾಗಿದೆ. ಈ ವೇಳೆ ಕರುಣಾಕರ ಅಮಿತಾಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಅಮಿತಾಳ ಕುತ್ತಿಗೆ, ಭುಜ, ಕವಿ ಮತ್ತು ಪಕ್ಕೆಗೆ ಚಾಕುವಿನಿಂದ ಚುಚ್ಚಿದ್ದಾನೆ. ಆಕೆ ಜೋರಾಗಿ ಕೂಗಿಕೊಂಡಿದ್ದಾಳೆ. ಕೂಡಲೆ ಅಕ್ಕಪಕ್ಕದವರು ಬಂದು ಅಮಿತಾಳನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಹತ್ಯೆಗೆ ಕಾರಣವೇನು?
ಎಂಬಿಎ ಪದವೀಧರನಾಗಿರುವ ಕರುಣಾಕರ ಎರಡೂವರೆ ವರ್ಷದ ಹಿಂದೆ ಬುಳ್ಳಾಪುರದ ಅಮಿತಾಳೊಂದಿಗೆ ಮದುವೆಯಾಗಿದ್ದ. ಮದುವೆ ಸಮಯದಲ್ಲಿ ಬಂಗಾರ ಮತ್ತು ಹಣ ಕೊಟ್ಟಿದ್ದರೂ ಇನ್ನೂ ಹೆಚ್ಚಿಗೆ ಬೇಕು ಎಂದು ಕರುಣಾಕರ ಪೀಡಿಸುತ್ತಿದ್ದ. ಕೊಡಲು ಸಾದ್ಯವಾಗದ ಹಿನ್ನೆಲೆಯಲ್ಲಿ ಜಗಳ ತೆಗೆದು ದುಷ್ಕೃತ್ಯ ಎಸಗಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರುಣಾಕರನ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಹೈವೇ ರಸ್ತೆಯಲ್ಲಿ ಉಪನ್ಯಾಸಕನ ಕಾರು ಅಡ್ಡಗಟ್ಟಲು ಯತ್ನ, ಹಿಂಬದಿ ಗಾಜಿಗೆ ಕಲ್ಲು ತೂರಾಟ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

About The Editor
ನಿತಿನ್ ಆರ್.ಕೈದೊಟ್ಲು
















