ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 31 AUGUST 2023
SHIMOGA : ಜಿಲ್ಲೆಯ ಜನರ ಬಹು ಸಮಯದ ಕನಸು ನನಸಾಗಿದೆ. ಇಂಡಿಗೋ (Indigo Flight) ಸಂಸ್ಥೆಯ ಎಟಿಆರ್ 72 ಮಾದರಿ ವಿಮಾನ ಶಿವಮೊಗ್ಗಕ್ಕೆ (Shimoga Airport) ಆಗಮಿಸಿತ್ತು. ಈ ವಿಮಾನಕ್ಕೆ ಜಿಲ್ಲೆಯಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.
ಬೆಂಗಳೂರಿನಲ್ಲು ಇಂಡಿಗೋ ಸಂಭ್ರಮ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ಸಂಸ್ಥೆಯ ಎಟಿಆರ್ 72 ವಿಮಾನ ಬೆಳಗ್ಗೆ 9.47ಕ್ಕೆ ಹಾರಾಟ ಆರಂಭಿಸಿತು. ಇದಕ್ಕೂ ಮೊದಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಡಿ.ಎಸ್.ಅರುಣ್, ಎಸ್.ಎನ್.ಚನ್ನಬಸಪ್ಪ, ಬಿ.ವೈ.ವಿಜಯೇಂದ್ರ, ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ ಹರತಾಳು ಹಾಲ್ಪಪ ಸೇರಿದಂತೆ ಹಲವು ಗಣ್ಯರು ಇಂಡಿಗೋ ಸಂಸ್ಥೆಯ ಸಿಬ್ಬಂದಿ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.
ಎರಡು ಸಾವಿರ ಅಡಿ ಎತ್ತರ ಹಾರಾಟ
ಬೆಂಗಳೂರಿನಿಂದ ಹೊರಟ ವಿಮಾನ 2,700 ಅಡಿ ಎತ್ತರದಲ್ಲಿ ಹಾರಾಟ ನಡೆಸಿತು. ಶಿವಮೊಗ್ಗದಲ್ಲಿ ಆಗಸದಲ್ಲೆ ವಿಮಾನ ನಿಲ್ದಾಣದ ಸುತ್ತಲು ಒಂದು ಸುತ್ತು ಹಾಕಿತು. ಬಳಿಕ ಓತಿಘಟ್ಟ ಕಡೆಯಿಂದ ಲ್ಯಾಂಡ್ ಆದ ವಿಮಾನ ನೇರವಾಗಿ ಟರ್ಮಿನಲ್ವರೆಗೆ ತಲುಪಿತು.
ವಿಮಾನಕ್ಕೆ ವಾಟರ್ ಸಲ್ಯೂಟ್
ವೈಮಾನಿಕ ಕ್ಷೇತ್ರದಲ್ಲಿ ಹೊಸ ವಿಮಾನಗಳಿಗೆ ವಾಟರ್ ಸಲ್ಯೂಟ್ ಸಲ್ಲಿಸಲಾಗುತ್ತದೆ. ಅದೇ ಮಾದರಿ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಪಕ್ಕದಲ್ಲಿ ಇಂಡಿಗೋ ವಿಮಾನಕ್ಕೆ ವಾಟರ್ ಸಲ್ಯೂಟ್ ಸಲ್ಲಿಸಲಾಯಿತು. ಎರಡು ಫೈರ್ ಇಂಜಿನ್ ವಾಹನಗಳ ಮೂಲಕ ನೀರನ್ನು ಮೇಲಕ್ಕೆ ಹಾಯಿಸಲಾಯಿತು. ಇದರ ವಿಡಿಯೋ ಇಲ್ಲಿದೆ.
View this post on Instagram
ಧ್ವಜ ಹಿಡಿದು ಖುಷಿ
ಶಿವಮೊಗ್ಗ ವಿಮಾನ ನಿಲ್ದಾಣದ ಹ್ಯಾಂಗರ್ನಲ್ಲಿ ವಿಮಾನದಿಂದ ಕೆಳಗಿಳಿದ ಗಣ್ಯರು ತ್ರಿವರ್ಣ ಧ್ವಜ ಪ್ರದರ್ಶಿಸಿದರು. ಇದೇ ವೇಳೆ ಇಂಡಿಗೋ ಸಂಸ್ಥೆಯ ಸಿಬ್ಬಂದಿ ಎಲ್ಲರೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡರು. ಇದರ ವಿಡಿಯೋ ಇಲ್ಲಿದೆ.
View this post on Instagram
ವೆಬ್ಸೈಟ್ ಅನಾವರಣ, ವೇದಿಕೆ ಕಾರ್ಯಕ್ರಮ
ಇನ್ನು, ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನದ ಆಗಮನದ ಹಿನ್ನೆಲೆ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೆ ವೇಳೆ ಶಿವಮೊಗ್ಗ ವಿಮಾನ ನಿಲ್ದಾಣದ ವೆಬ್ಸೈಟ್ ಅನಾವರಣ ಮಾಡಲಾಯಿತು.
ಮಧ್ಯಾಹ್ನ ಬೆಂಗಳೂರಿನತ್ತ ವಿಮಾನ
ಕಾರ್ಯಕ್ರಮ ಮತ್ತು ಗಣ್ಯರು ವಿಮಾನದ ಮೂಲಕ ಬೆಂಗಳೂರಿಗೆ ತೆರಳಬೇಕಿದ್ದರಿಂದ ಇಂಡಿಗೋ ವಿಮಾನ ಶಿವಮೊಗ್ಗದಿಂದ ತಡವಾಗಿ ಪ್ರಯಾಣ ಆರಂಭಿಸಿತು. ಮಧ್ಯಾಹ್ನ 12.08ಕ್ಕೆ ಶಿವಮೊಗ್ಗದಿಂದ ಹಾರಾಟ ಆರಂಭಿಸಿತು. ಸಚಿವರಾದ ಎಂ.ಬಿ.ಪಾಟೀಲ್, ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















