SHIVAMOGGA LIVE NEWS | 12 MAY 2023
SHIMOGA : ಚೋರಡಿಯಲ್ಲಿ ಖಾಸಗಿ ಬಸ್ಸುಗಳ ನಡುವೆ ಭೀಕರ ಅಪಘಾತ (Head On) ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬಸ್ ಚಾಲಕನ ಪರಿಚಿತ ಮತ್ತು ಗಾಯಾಳುವೊಬ್ಬರು ಘಟನೆ ಕುರಿತು ವಿವರಿಸಿದ್ದಾರೆ. ಬಸ್ ಚಾಲಕ ಅತಿ ವೇಗವಾಗಿ ಚಾಲನೆ ಮಾಡಿದ್ದೆ ಘಟನೆಗೆ ಕಾರಣ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ನಲ್ಲಿದ್ದ ಪ್ರಯಾಣಿಕ ಕಿಟ್ಟಿ ಘಟನೆಯ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ – ಚೋರಡಿ ಅಪಘಾತ ಕೇಸ್, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಕಿಟ್ಟಿ ಹೇಳಿದ್ದೇನು?
ʼನಾನು ಬೆಂಗಳೂರಿನಲ್ಲಿ ಬಸ್ ಚಾಲಕ. ವೋಟ್ ಹಾಕಲು ಬಂದಿದ್ದೆ. ಇವತ್ತು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಹೋಗಿ, ಅಲ್ಲಿಂದ ಬೆಂಗಳುರಿಗೆ ತೆರಳಬೇಕಿತ್ತು. ಕಾಳಪ್ಪ ಬಸ್ಸಿನ ಚಾಲಕ ಪರಿಚಯವಿದ್ದರಿಂದ ಆತನ ಪಕ್ಕದ ಸೀಟಿನಲ್ಲಿಯೇ ಕುಳಿತಿದ್ದೆ.ʼ
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ʼಶಿಕಾರಿಪುರದಿಂದ ಹೊರಟಾಗಲೆ ಸಂಜೆ 6 ಗಂಟೆಯಾಗಿತ್ತು. ಹಿತ್ಲಾ ಬರುವವರೆಗೆ ಬಸ್ಸು ನಿಧಾನಕ್ಕೆ ಹೋಗುತ್ತಿತ್ತು. ಅಲ್ಲಿಂದ ಚಾಲಕ ಅತಿ ವೇಗವಾಗಿ ಬಸ್ ಓಡಿಸಲು ಆರಂಭಿಸಿದ. ರಾತ್ರಿ 7 ಗಂಟೆಯೊಳಗೆ ಶಿವಮೊಗ್ಗ ತಲುಪಬೇಕು ಎಂದು ಚಲಾಯಿಸುತ್ತಿದ್ದ. ಮಧ್ಯೆ ಮಧ್ಯೆ ಮೊಬೈಲ್ನಲ್ಲಿಯು ಮಾತನಾಡುತ್ತಿದ್ದ. ಚೋರಡಿ ಸೇತುವೆ ಬಳಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆಸಿದ. ಎದುರಿನಿಂದ ಬರುತ್ತಿದ್ದ ಬಸ್ಸಿನದ್ದು ಯಾವುದೇ ತಪ್ಪಿಲ್ಲʼ ಎಂದು ಕಿಟ್ಟಿ ತಿಳಿಸಿದರು.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





