ಚೋರಡಿ ಬಳಿ ಭೀಕರ ಅಪಘಾತ, ಪ್ರತ್ಯಕ್ಷದರ್ಶಿ ಹೇಳಿದ್ದೇನು? ಹೇಗಾಯ್ತ ಆಕ್ಸಿಡೆಂಟ್‌?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 12 MAY 2023

SHIMOGA : ಚೋರಡಿಯಲ್ಲಿ ಖಾಸಗಿ ಬಸ್ಸುಗಳ ನಡುವೆ ಭೀಕರ ಅಪಘಾತ (Head On) ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬಸ್‌ ಚಾಲಕನ ಪರಿಚಿತ ಮತ್ತು ಗಾಯಾಳುವೊಬ್ಬರು ಘಟನೆ ಕುರಿತು ವಿವರಿಸಿದ್ದಾರೆ. ಬಸ್‌ ಚಾಲಕ ಅತಿ ವೇಗವಾಗಿ ಚಾಲನೆ ಮಾಡಿದ್ದೆ ಘಟನೆಗೆ ಕಾರಣ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Bus-Collision-injured-in-Mc-Gann-Hospital.

ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕ ಕಿಟ್ಟಿ ಘಟನೆಯ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ – ಚೋರಡಿ ಅಪಘಾತ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

ಕಿಟ್ಟಿ ಹೇಳಿದ್ದೇನು?

ʼನಾನು ಬೆಂಗಳೂರಿನಲ್ಲಿ ಬಸ್‌ ಚಾಲಕ. ವೋಟ್‌ ಹಾಕಲು ಬಂದಿದ್ದೆ. ಇವತ್ತು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಹೋಗಿ, ಅಲ್ಲಿಂದ ಬೆಂಗಳುರಿಗೆ ತೆರಳಬೇಕಿತ್ತು.‌ ಕಾಳಪ್ಪ ಬಸ್ಸಿನ ಚಾಲಕ ಪರಿಚಯವಿದ್ದರಿಂದ ಆತನ ಪಕ್ಕದ ಸೀಟಿನಲ್ಲಿಯೇ ಕುಳಿತಿದ್ದೆ.ʼ

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ʼಶಿಕಾರಿಪುರದಿಂದ ಹೊರಟಾಗಲೆ ಸಂಜೆ 6 ಗಂಟೆಯಾಗಿತ್ತು. ಹಿತ್ಲಾ ಬರುವವರೆಗೆ ಬಸ್ಸು ನಿಧಾನಕ್ಕೆ ಹೋಗುತ್ತಿತ್ತು. ಅಲ್ಲಿಂದ ಚಾಲಕ ಅತಿ ವೇಗವಾಗಿ ಬಸ್‌ ಓಡಿಸಲು ಆರಂಭಿಸಿದ. ರಾತ್ರಿ 7 ಗಂಟೆಯೊಳಗೆ ಶಿವಮೊಗ್ಗ ತಲುಪಬೇಕು ಎಂದು ಚಲಾಯಿಸುತ್ತಿದ್ದ. ಮಧ್ಯೆ ಮಧ್ಯೆ ಮೊಬೈಲ್‌ನಲ್ಲಿಯು ಮಾತನಾಡುತ್ತಿದ್ದ. ಚೋರಡಿ ಸೇತುವೆ ಬಳಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆಸಿದ. ಎದುರಿನಿಂದ ಬರುತ್ತಿದ್ದ ಬಸ್ಸಿನದ್ದು ಯಾವುದೇ ತಪ್ಪಿಲ್ಲʼ ಎಂದು ಕಿಟ್ಟಿ ತಿಳಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment