ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 FEBRURARY 2023
SHIMOGA : ವಿಮಾನ ನಿಲ್ದಾಣ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಭಾಷಣ (Speech) ಆರಂಭಿಸಿದರು. ಅಲ್ಲದೆ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿಕೊಂಡು, ನಾಡ ಗೀತೆಯ ಮೊದಲು ಸಾಲುಗಳನ್ನು ಉಚ್ಚರಿಸಿದರು.

ಸೋಗಾನೆಯಲ್ಲಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ವೇಳೆ ಕನ್ನಡದಲ್ಲಿಯೇ ಪ್ರಧಾನಿ ಮೋದಿ ಭಾಷಣ (Speech) ಆರಂಭಿಸಿದ್ದರು, ನೆರೆದಿದ್ದವರ ಮೆಚ್ಚುಗೆ ಗಳಿಸಿತು.
ಕನ್ನಡ ಭಾಷಣ, ಕುವೆಂಪು ಸ್ಮರಣೆ
‘ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ. ಜೈ ಭಾರತ ಜನನಿಯ ತನುಜಾತೆ. ಜಯ ಹೇ ಕರ್ನಾಟಕ ಮಾತೆ’ ಎಂದು ಪ್ರಧಾನಿ ಮೋದಿ ಅವರು ಹೇಳುತ್ತಿದ್ದಂತೆ ಸಭೀಕರು ಜೈ ಎಂದು ಘೋಷಣೆ ಕೂಗಿದರು.
ಇನ್ನು, ಏಕ ಭಾರತ, ಶ್ರೇಷ್ಠ ಭಾರತದ ಸಮರ್ಪಣೆ ಮನೋಭವ ಹೊಂದಿದ್ದ ರಾಷ್ಟ್ರಕವಿ ಕುವೆಂಪು ಅವರ ನೆಲಕ್ಕೆ ನಾನು ನಮನ ಸಲ್ಲಿಸುತ್ತೇನೆ ಎಂದು ಹೇಳಿದಾಗಲೂ ಜನರು ಚಪ್ಪಾಳೆ ತಟ್ಟಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಟರ್ಮಿನಲ್ ನಲ್ಲಿ ಪ್ರಧಾನಿ ಮೋದಿ ಸಂಚಾರ
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













