ಶಿವಮೊಗ್ಗದಲ್ಲಿ ಮೋದಿ, ಕನ್ನಡದಲ್ಲೇ ಭಾಷಣ ಆರಂಭ, ರಾಷ್ಟ್ರಕವಿಯ ಸ್ಮರಣೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 27 FEBRURARY 2023

SHIMOGA : ವಿಮಾನ ನಿಲ್ದಾಣ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಭಾಷಣ (Speech) ಆರಂಭಿಸಿದರು. ಅಲ್ಲದೆ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿಕೊಂಡು, ನಾಡ ಗೀತೆಯ ಮೊದಲು ಸಾಲುಗಳನ್ನು ಉಚ್ಚರಿಸಿದರು.

Felicitation-For-PM-Narendra-Modi-in-Shivamogga-Airport

ಸೋಗಾನೆಯಲ್ಲಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ವೇಳೆ ಕನ್ನಡದಲ್ಲಿಯೇ ಪ್ರಧಾನಿ ಮೋದಿ ಭಾಷಣ (Speech) ಆರಂಭಿಸಿದ್ದರು, ನೆರೆದಿದ್ದವರ ಮೆಚ್ಚುಗೆ ಗಳಿಸಿತು.

ಕನ್ನಡ ಭಾಷಣ, ಕುವೆಂಪು ಸ್ಮರಣೆ

‘ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ. ಜೈ ಭಾರತ ಜನನಿಯ ತನುಜಾತೆ. ಜಯ ಹೇ ಕರ್ನಾಟಕ ಮಾತೆ’ ಎಂದು ಪ್ರಧಾನಿ ಮೋದಿ ಅವರು ಹೇಳುತ್ತಿದ್ದಂತೆ ಸಭೀಕರು ಜೈ ಎಂದು ಘೋಷಣೆ ಕೂಗಿದರು.

ಇನ್ನು, ಏಕ ಭಾರತ, ಶ್ರೇಷ್ಠ ಭಾರತದ ಸಮರ್ಪಣೆ ಮನೋಭವ ಹೊಂದಿದ್ದ ರಾಷ್ಟ್ರಕವಿ ಕುವೆಂಪು ಅವರ ನೆಲಕ್ಕೆ ನಾನು ನಮನ ಸಲ್ಲಿಸುತ್ತೇನೆ ಎಂದು ಹೇಳಿದಾಗಲೂ ಜನರು ಚಪ್ಪಾಳೆ ತಟ್ಟಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಟರ್ಮಿನಲ್ ನಲ್ಲಿ ಪ್ರಧಾನಿ ಮೋದಿ ಸಂಚಾರ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment