SHIVAMOGGA LIVE NEWS | 28 ಫೆಬ್ರವರಿ 2022
ಬೈಕ್ ಒಂದರ ಸೀಟಿನ ಅಡಿ ಕುಳಿತು ಬುಸುಗುಡುತ್ತಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಗೋಂದಿ ಚಟ್ನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಸುರೇಶ್ ಎಂಬುವವರಿಗೆ ಸೇರಿದ ಸ್ಟಾರ್ ಸಿಟಿ ಬೈಕ್’ನ ಸೀಟ್ ಕೆಳಗೆ ನಾಗರ ಹಾವು ಸೇರಿಕೊಂಡಿತ್ತು. ಇದು ಗೊತ್ತಾಗುತ್ತಲೆ ಸುರೇಶ್ ಅವರು ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ ಅವರು ಬೈಕ್ ಸೀಟಿನ ಕೆಳಗೆ ಸೇರಿಕೊಂಡಿದ್ದ ನಾಗರ ಹಾವನ್ನು ರಕ್ಷಣೆ ಮಾಡಿದ್ದಾರೆ. 2 ಅಡಿ ಉದ್ದವಿದ್ದ ನಾಗರ ಹಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.
ಇದನ್ನೂ ಓದಿ | ಬೈಕ್ ಮಾಸ್ಕ್’ನಲ್ಲಿ ಮೂರುವರೆ ಅಡಿ ಉದ್ದದ ಹಸಿರು ಹಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200