ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಶಿವಮೊಗ್ಗ ತಾಲೂಕು ಬೇಡರಹೊಸಹಳ್ಳಿ ಸಮೀಪ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ರಾಯಚೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ 29 ಪ್ರಯಾಣಿಕರು ಇದ್ದರು. ಈ ಪೈಕಿ ಮೂವರಿಗೆ ಗಂಭೀರ ಸ್ವರೂಪದ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದಿಂದಾಗಿ ಈ ರಸ್ತೆಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಸೋಮಿನಕೊಪ್ಪ ಫ್ಲೈ ಓವರ್ ಕೆಳಗೆ ಸಾಫ್ಟ್ವೇರ್ ಇಂಜಿನಿಯರ್ಗೆ ಮೇಲೆ ಅಟ್ಯಾಕ್, ಆಗಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200