ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021
ನೈಋತ್ಯ ರೈಲ್ವೆಯ ಶಿವಮೊಗ್ಗ ವಿಭಾಗದ ರೈಲ್ವೆ ಲೆವೆಲ್ ಕ್ರಾಸ್-79(ಕುಂಸಿ ರೈಲ್ವೆ ಗೇಟ್)ರಲ್ಲಿ ತಾಂತ್ರಿಕ ಪರಿಶೀಲನೆ ನಿಮಿತ್ತ ಡಿ.22ರ ರಾತ್ರಿ 7ರವರೆಗೆ ಗೇಟ್ ಬಂದ್ ಮಾಡಲಾಗಿದೆ. ಕುಂಸಿ – ಆನಂದಪುರ ನಡುವೆ ಲಘು ಮತ್ತು ಭಾರಿ ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದು ಪರ್ಯಾಯ ಮಾರ್ಗ?
ಶಿವಮೊಗ್ಗದಿಂದ ತೆರಳುವ ಭಾರಿ ವಾಹನಗಳು ಆಯನೂರು, 5ನೇ ಮೈಲಿಗಲ್ಲು, ಸೂಡೂರು, ಶೆಟ್ಟಿಕೆರೆ ಮಾರ್ಗವಾಗಿ ಚೋರಡಿ ತಲುಪಬಹುದು. ಸಾಗರದಿಂದ ಬರುವ ವಾಹನಗಳು ಚೋರಡಿ, ಶೆಟ್ಟಿಕೆರೆ, ಸೂಡೂರು, 5ನೇ ಮೈಲಿಗಲ್ಲು, ಆಯನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಸಂಚರಿಸಬಹುದು.
ಶಿವಮೊಗ್ಗದಿಂದ ಸಾಗರಕ್ಕೆ ತೆರಳುವ ಲಘು ವಾಹನಗಳು ಕುಂಸಿ, ಹುಬ್ಬನಹಳ್ಳಿ, ಬಾಳೆಕೊಪ್ಪ, ಚಿಕ್ಕಮರಸ, ಕುಂಸಿ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ತೆರಳುವ ವಾಹನಗಳು ಕೆರೆಕೋಡಿಯಿಂದ ಚಿಕ್ಕಮರಸ, ಬಾಳೆಕೊಪ್ಪ, ಹುಬ್ಬನಹಳ್ಳಿ, ಕುಂಸಿ ಮುಖಾಂತರ ರಾಷ್ಟ್ರೀಯ ಹೆದ್ದಾರಿ 206ಕ್ಕೆ ತಲುಪುವುದು. ಸೋಮವಾರ ರಾತ್ರಿಯಿಂದಲೇ ಮಾರ್ಗ ಬದಲಾವಣೆ ಆಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200