Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಪಾರ್ಥೀವ ಶರೀರಕ್ಕೆ ಬಿಜೆಪಿ ಧ್ವಜ ಹೊದಿಸಿ ಅಂತಿಮ ನಮನ, ಪಂಚಭೂತಗಳಲ್ಲಿ ಭಾನುಪ್ರಕಾಶ್‌ ಲೀನ

ಪಾರ್ಥೀವ ಶರೀರಕ್ಕೆ ಬಿಜೆಪಿ ಧ್ವಜ ಹೊದಿಸಿ ಅಂತಿಮ ನಮನ, ಪಂಚಭೂತಗಳಲ್ಲಿ ಭಾನುಪ್ರಕಾಶ್‌ ಲೀನ

18/06/2024 9:29 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 18 JUNE 2024

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಅವರ ಅಂತ್ಯ ಸಂಸ್ಕಾರ (Last Rites) ಕಳೆದ ರಾತ್ರಿ ಮತ್ತೂರು ಗ್ರಾಮದಲ್ಲಿ ನಡೆಯಿತು. ಬ್ರಾಹ್ಮಣ ಸಂಪ್ರದಾಯದಂತೆ ವಿಧಿವಿಧಾನ ನೆರವೇರಿಸಲಾಯಿತು.

ಬಿಜೆಪಿ ಧ್ವಜ ಹೊದಿಸಿ ಅಂತಿಮ ನಮನ

ಇದಕ್ಕೂ ಮೊದಲು ಎಂ.ಬಿ.ಭಾನುಪ್ರಕಾಶ್‌ ಅವರ ಪಾರ್ಥೀವ ಶರೀರಕ್ಕೆ ಬಿಜೆಪಿ, ಕಾಂಗ್ರೆಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಂತಿಮ ನಮನ ಸಲ್ಲಿಸಿದರು. ವಿವಿಧೆಡೆಯಿಂದ ಅಗಮಿಸಿದ್ದ ಸಂಬಂಧಿಕರು, ಸ್ನೇಹಿತರು, ಕಾರ್ಯಕರ್ತರು, ಬೆಂಬಲಿಗರು ಭಾನುಪ್ರಕಾಶ್‌ ಅವರನ್ನು ನೆನೆದು ಕಂಬನಿ ಮಿಡಿದರು.

ಇದೇ ವೇಳೆ ಎಂ.ಬಿ.ಭಾನುಪ್ರಕಾಶ್‌ ಅವರ ಪಾರ್ಥೀವ ಶರೀರಕ್ಕೆ ಬಿಜೆಪಿ ಧ್ವಜನ್ನು ಹೊದಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಹರತಾಳು ಹಾಲಪ್ಪ, ಮುಖಂಡ ವಿನ್ಸಂಟ್‌ ರೋಡ್ರಿಗಸ್‌ ಸೇರಿದಂತೆ ಹಲವರು ಬಿಜೆಪಿ ಧ್ವಜ ಹೊದಿಸಿ ಗೌರವ ಸಲ್ಲಿಸಿದರು.

ಮತ್ತೂರಿನಲ್ಲಿ ಶ್ರದ್ಧಾಂಜಲಿ ಸಭೆ

ಎಂ.ಬಿ.ಭಾನಪ್ರಕಾಶ್‌ ಅವರ ನಿವಾಸದ ಬಳಿ ಶ್ರ‍ದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಹಲವರು ಭಾನುಪ್ರಕಾಶ್‌ ಅವರನ್ನು ಸ್ಮರಿಸಿಕೊಂಡರು.

ಬಿ.ವೈ.ರಾಘವೇಂದ್ರ, ಸಂಸದ : ಇಂದು ನಮ್ಮೆಲ್ಲರ ನಕ್ಷತ್ರ ದೂರವಾಗಿದೆ. ಇಷ್ಟು ಬೇಗ ಈ ದಿನವನ್ನು ನಿರೀಕ್ಷಿಸಿರಲಿಲ್ಲ. ಸಾವಿರಾರು ಕಾರ್ಯಕರ್ತರಿಗೆ ಪ್ರೇರಣೆ ನೀಡಿದವರು. ಸಂಘಟನೆಯಲ್ಲಿ ವ್ಯಕ್ತಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾದರೆ ಅದನ್ನು ಸರಿಪಡಿಸುತ್ತಿದ್ದ ನಾಯಕ. ಅವರ ಪ್ರೇರಣೆ, ಮಾರ್ಗದರ್ಶನ ಈ ಸಮಾಜಕ್ಕೆ ಇನ್ನಷ್ಟು ವರ್ಷ ಬೇಕಿತ್ತು. ಅವರ ಅಪೇಕ್ಷೆಗೆ ತಕ್ಕಂತೆ ನಾವು ನಡೆದರೆ ನಿಜವಾದ ಶ್ರದ್ಧಾಂಜಲಿ.

ಆರಗ ಜ್ಞಾನೇಂದ್ರ, ಶಾಸಕ : ಸಂಘಟನೆಯ ಬಹುದೊಡ್ಡ ನೇತಾರರಾಗಿ ಪಕ್ಷ ಕಟ್ಟಿದ, ತನ್ನ ಮಕ್ಕಳನ್ನು ಆರ್‌ಎಸ್‌ಎಸ್ ಪ್ರಚಾರಕರನ್ನಾಗಿ ಮಾಡಿದವರು ಭಾನುಪ್ರಕಾಶ್‌. ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಅವರ ಕೊರತೆ ಸದಾ ನಮ್ಮನ್ನು ಕಾಡುತ್ತದೆ. ಇನ್ನೊಬ್ಬ ಭಾನುಪ್ರಕಾಶ ಹುಟ್ಟಿ ಬರುತ್ತಾರೆಂಬ ವಿಶ್ವಾಸವಿಲ್ಲ.

ಇದನ್ನೂ ಓದಿ – ಬಂಗಾರಪ್ಪಗೆ ಎದುರಾಳಿಯಾಗಿದ್ದರು, ಗಾಜನೂರಿನಿಂದ ಗೆದ್ದಿದ್ದರು, ಭಾನುಪ್ರಕಾಶ್‌ ಕುರಿತು ಇಲ್ಲಿದೆ 5 ಪ್ರಮುಖಾಂಶ

ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ : ದಲಿತ ಜನಾಂಗದ ಭಾಗ್ಯೋದಯವನ್ನು ನಿರ್ಮಿಸುತ ಹಾಡನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬೇರೆಯವರಿಗೆ ಪ್ರೇರಣೆ ನೀಡಿದವರು ಭಾನುಪ್ರಕಾಶ. ವಿಧಾನ ಪರಿಷತ್‌ನಲ್ಲಿ ಸಂಸ್ಕೃತದ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ಎಲ್ಲರೂ ಸಂಸ್ಕೃತದ ಬಗ್ಗೆ ಅವಲೋಕಿಸುವಂತೆ ಮಾಡಿದ್ದರು.

ಪಟ್ಟಾಭಿರಾಮ್‌, ಆರ್‌ಎಸ್‌ಎಸ್‌ ಪ್ರಾಂತ ಸಹ ಕಾರ್ಯವಾಹ : ಬಿಜೆಪಿ, ಮತ್ತೂರು, ಸ್ವಯಂಸೇವಕ ಸಂಘ, ಮನೆ ಎಲ್ಲವನ್ನೂ ಸಮತೂಕದಲ್ಲಿ ನಿಭಾಯಿಸಿದವರು ಭಾನುಪ್ರಕಾಶ. ಅವರ ಬಗ್ಗೆ ಹೊಟ್ಟೆಕಿಚ್ಚುಪಡುವಷ್ಟು ಅತ್ಯುತ್ತಮ ಹಾಗೂ ಧನ್ಯ ಸ್ವಯಂಸೇವಕ. ಆರ್ಥಿಕ ಪ್ರಾಮಾಣಿಕತೆಯನ್ನು ಸಂಘ ಯಾವಾಗಲೂ ನಿರೀಕ್ಷೆ ಮಾಡುತ್ತದೆ. ಜೇಬು ಮತ್ತು ಕೈಯನ್ನು ಅವರು ಎಂದೂ ಎಂಜಲು ಮಾಡಿಕೊಂಡಿರಲಿಲ್ಲ.

ಇದನ್ನೂ ಓದಿ – ಗೋಪಿ ಸರ್ಕಲ್‌ನಲ್ಲಿ ಎಂ.ಬಿ.ಭಾನುಪ್ರಕಾಶ್‌ ಕೊನೆಯ ಭಾಷಣ, ಏನೆಲ್ಲ ಹೇಳಿದ್ದರು?, ಇಲ್ಲಿದೆ ಡಿಟೇಲ್ಸ್‌

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Vidyanagara-Smart-city-board ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ
Next Article Bhadra-Dam-General-Image. ಭದ್ರಾ ಜಲಾಶಯದ ಒಳ ಹರಿವು ಕುಸಿತ, ಅಚ್ಚುಕಟ್ಟು ಭಾಗದ ರೈತರಲ್ಲಿ ಆತಂಕ, ಇವತ್ತು ಎಷ್ಟಿದೆ ನೀರಿನ ಮಟ್ಟ?

ಇದನ್ನೂ ಓದಿ

tunga-dam-water-release-and-mantapa-in-shimoga
SHIVAMOGGASHIVAMOGGA CITY

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
House-wall-collapse-at-mandagatta
SHIVAMOGGA

ಆಯನೂರು ಸಮೀಪ ಮನೆ ಗೋಡೆ ಕುಸಿದು ವೃದ್ಧೆ ಸಾವು, ಮಹಿಳೆಗೆ ಗಂಭೀರ ಗಾಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Tree-falls-to-Shimoga-Thirthahalli-Road-at-gajanuru
SHIVAMOGGA

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಗೆ ಉರುಳಿದ ಬೃಹತ್ ಆಲದ ಮರ, ವಾಹನ ಸಂಚಾರಕ್ಕೆ ಅಡಚಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
KUMSI NEWS 1
SHIVAMOGGA

ಕುಂಸಿ ಮೆಸ್ಕಾಂ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆ, ಯಾವಾಗ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Lokayukta-sudden-visit-to-anganavadis
SHIVAMOGGA

ಶಿವಮೊಗ್ಗದ ಅಂಗನವಾಡಿಗಳಿಗೆ ಲೋಕಾಯುಕ್ತರು ದಿಢೀರ್ ಭೇಟಿ, ಪರಿಶೀಲನೆ ವೇಳೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
100625 Bus mishap at bedarahosahalli in Shimoga taluk
SHIVAMOGGA

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹೆದ್ದಾರಿಗೆ ಅಡ್ಡಲಾಗಿ KSRTC ಬಸ್‌ ಪಲ್ಟಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?